July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ ಕೌಶಲ್ಯ ವಿಷಯದ ಕುರಿತು ಮಾತನಾಡುತ್ತಾ, ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಪೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ ಭಿತ್ತಿ ಪತ್ರಿಕೆ’ ಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸನಾ ಶರಿನಾ ಪಿಂಟೋ ಸ್ವಾಗತಿಸಿದರು. ಅಭಿಜ್ಞಾ ಧನ್ಯವಾದವಿತ್ತರು. ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!