September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ ಕೌಶಲ್ಯ ವಿಷಯದ ಕುರಿತು ಮಾತನಾಡುತ್ತಾ, ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಪೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ ಭಿತ್ತಿ ಪತ್ರಿಕೆ’ ಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸನಾ ಶರಿನಾ ಪಿಂಟೋ ಸ್ವಾಗತಿಸಿದರು. ಅಭಿಜ್ಞಾ ಧನ್ಯವಾದವಿತ್ತರು. ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಪಟ್ರಮೆ: ಬರಮೇಲು ನಿವಾಸಿ ಪುಟ್ಟಣ್ಣ ಗೌಡ ನಿಧನ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!