25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

ಕೊಕ್ಕಡ: ಕೊಕ್ಕಡ ಗ್ರಾಮ ವ್ಯಾಪ್ತಿಯ ಸೌತಡ್ಕದಲ್ಲಿ ಜು. 17 ರಂದು ಸಂಭವಿಸಿದ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಳಿಕ ಅರಣ್ಯ ಇಲಾಖೆ ಗಂಭೀರವಾಗಿ ಕ್ರಮ ಕೈಗೊಂಡಿದ್ದು, ಸ್ಥಳದಲ್ಲಿಯೇ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನಿಯೋಜಿಸಿ 24 ಗಂಟೆಯ ಪರಿವೀಕ್ಷಣೆಯ ಕಾರ್ಯ ನಡೆಸುತ್ತಿದೆ.

ಅರಣ್ಯದತ್ತ ತೆರಳಿದ ಆನೆಗಳ ನಡೆ-ನುಡಿಗಳನ್ನು ಪರಿಶೀಲಿಸುತ್ತಿರುವ ಅಧಿಕಾರಿಗಳು, ಅವುಗಳನ್ನು ಅರಣ್ಯದೊಳಗೆ ಹಿಮ್ಮೆಟ್ಟಿಸುವ ಜವಾಬ್ದಾರಿಯನ್ನೂ ಕೈಗೊಂಡಿದ್ದು, ಯಾವುದೇ ಮತ್ತೊಂದು ದುರ್ಘಟನೆ ನಡೆಯದಂತೆ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಈ ಮಧ್ಯೆ, ಕೆಲವು ಅಸಮಾಜಿಕ ಶಕ್ತಿಗಳು ಸೌತಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದು, ಸಾರ್ವಜನಿಕರಲ್ಲಿ ಗೊಂದಲ ಹಾಗೂ ಭಯವನ್ನು ಮೂಡಿಸುತ್ತಿರುವುದಾಗಿ ಅರಣ್ಯ ಇಲಾಖೆ ಹೇಳಿದೆ.

ಸಾರ್ವಜನಿಕರು ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಗಾಗಿ ಅರಣ್ಯ ಇಲಾಖೆಯು ರಚಿಸಿರುವ ವಾಟ್ಸಾಪ್ ಗ್ರೂಪಿಗೆ ಆಧಾರ ವಹಿಸಬೇಕೆಂದು ಮನವಿ ಮಾಡಿದೆ. ಈ ಗ್ರೂಪ್‌ ಮೂಲಕ ಇಲಾಖೆ ಅಧಿಕಾರಿಗಳು ನಿತ್ಯದ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಈ ತುರ್ತು ಕ್ರಮಗಳನ್ನು ಸಾರ್ವಜನಿಕರು ಸಹಕರಿಸುವ ಮೂಲಕ ಪರಿಸ್ಥಿತಿಯನ್ನು ಶಾಂತವಾಗಿ ನಿರ್ವಹಿಸಲು ಸಹಕಾರ ನೀಡಬೇಕೆಂದು ಇಲಾಖೆಯ ಹಿರಿಯ ಅಧಿಕಾರಿಗಳು ಮಾಧ್ಯಮಗಳ ಮೂಲಕ ವಿನಂತಿಸಿದ್ದಾರೆ.

Related posts

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya
error: Content is protected !!