37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಕೊಕ್ಕಡ : ಸೌತಡ್ಕದ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರೊಂದಿಗೆ ಸಮಾಲೋಚಿಸಿ, ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರವನ್ನು ಒದಗಿಸುವ ಬಗ್ಗೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು ಹಾಗೂ ಕುಟುಂಬದ ಸದಸ್ಯರೋರ್ವರಿಗೆ ಸರಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು. ಅರಣ್ಯ ಇಲಾಖೆಯ ವತಿಯಿಂದ ಪರಿಹಾರ ಸೌಲಭ್ಯಗಳನ್ನು ತುರ್ತಾಗಿ ಒದಗಿಸುವಂತೆ ಜಿಲ್ಲಾ ಅರಣ್ಯ ಅಧಿಕಾರಿಯವರಿಗೆ ಅಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ನೆಲ್ಯಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ ಬೆಳ್ತಂಗಡಿ ತಾಲೂಕಿನ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಹಾಗೂ ವಿಶ್ವ ಹಿಂದೂ ಪರಿಷತ್ ನ ಮುಖಂಡರಾದ ನವೀನ್ ನೆರಿಯ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
error: Content is protected !!