25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ ‘ಆಟಿಡೊಂಜಿ ದಿನ’ವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಖ್ಯಾತ ತುಳುರಂಗಭೂಮಿ ಕಲಾವಿದ ವಿ ಎಸ್ ಶಶಿಧರ್ ದೇವಾಡಿಗ ನೆಲ್ಲಿಕಾರು ಅವರು ಆಗಮಿಸಿ ಆಟಿ ತಿಂಗಳ ವೈಜ್ಞಾನಿಕ ಹಿನ್ನಲೆ, ಮಹತ್ವ, ಹಾಗೂ ಸಂಪ್ರದಾಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಗೀತಾ ಮಾತನಾಡಿ ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ನೆನಪುಗಳನ್ನು ಹಂಚಿಕೊಂಡರು.
ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿ, ಸಾಂಸ್ಕೃತಿಕ ಸಂಘದ ಮುಖ್ಯಸ್ಥ ಪದ್ಮನಾಭ ಬಿ ಕೆ ಸ್ವಾಗತಿಸಿ, ಇಂಗ್ಲಿಷ್ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ವಂದಿಸಿದರು.
ತುಳುನಾಡಿನ ಸಂಸ್ಕೃತಿ ಪರಂಪರೆಗಳನ್ನು ಬಿಂಬಿಸುವ ತುಳು ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ಆಟಿ ತಿಂಗಳ ತಿನಿಸುಗಳ ಪ್ರದರ್ಶನ ಹಾಗೂ ಆಟಿಯ ಭೋಜನವು ಕಾರ್ಯಕ್ರಮದ ವಿಶೇಷವಾಗಿತ್ತು.

Related posts

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya
error: Content is protected !!