25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ ಕೌಶಲ್ಯ ವಿಷಯದ ಕುರಿತು ಮಾತನಾಡುತ್ತಾ, ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಪೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ ಭಿತ್ತಿ ಪತ್ರಿಕೆ’ ಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸನಾ ಶರಿನಾ ಪಿಂಟೋ ಸ್ವಾಗತಿಸಿದರು. ಅಭಿಜ್ಞಾ ಧನ್ಯವಾದವಿತ್ತರು. ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya
error: Content is protected !!