23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ ಕೌಶಲ್ಯ ವಿಷಯದ ಕುರಿತು ಮಾತನಾಡುತ್ತಾ, ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಪೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ ಭಿತ್ತಿ ಪತ್ರಿಕೆ’ ಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸನಾ ಶರಿನಾ ಪಿಂಟೋ ಸ್ವಾಗತಿಸಿದರು. ಅಭಿಜ್ಞಾ ಧನ್ಯವಾದವಿತ್ತರು. ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya
error: Content is protected !!