25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ ಕೌಶಲ್ಯ ವಿಷಯದ ಕುರಿತು ಮಾತನಾಡುತ್ತಾ, ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಪೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ ಭಿತ್ತಿ ಪತ್ರಿಕೆ’ ಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸನಾ ಶರಿನಾ ಪಿಂಟೋ ಸ್ವಾಗತಿಸಿದರು. ಅಭಿಜ್ಞಾ ಧನ್ಯವಾದವಿತ್ತರು. ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya
error: Content is protected !!