22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ ಕೌಶಲ್ಯ ವಿಷಯದ ಕುರಿತು ಮಾತನಾಡುತ್ತಾ, ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಪೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ ಭಿತ್ತಿ ಪತ್ರಿಕೆ’ ಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸನಾ ಶರಿನಾ ಪಿಂಟೋ ಸ್ವಾಗತಿಸಿದರು. ಅಭಿಜ್ಞಾ ಧನ್ಯವಾದವಿತ್ತರು. ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!