25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ ಕೌಶಲ್ಯ ವಿಷಯದ ಕುರಿತು ಮಾತನಾಡುತ್ತಾ, ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಪೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ ಭಿತ್ತಿ ಪತ್ರಿಕೆ’ ಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸನಾ ಶರಿನಾ ಪಿಂಟೋ ಸ್ವಾಗತಿಸಿದರು. ಅಭಿಜ್ಞಾ ಧನ್ಯವಾದವಿತ್ತರು. ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!