25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

ಕೊಕ್ಕಡ: ಕೊಕ್ಕಡ ಗ್ರಾಮ ವ್ಯಾಪ್ತಿಯ ಸೌತಡ್ಕದಲ್ಲಿ ಜು. 17 ರಂದು ಸಂಭವಿಸಿದ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಳಿಕ ಅರಣ್ಯ ಇಲಾಖೆ ಗಂಭೀರವಾಗಿ ಕ್ರಮ ಕೈಗೊಂಡಿದ್ದು, ಸ್ಥಳದಲ್ಲಿಯೇ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನಿಯೋಜಿಸಿ 24 ಗಂಟೆಯ ಪರಿವೀಕ್ಷಣೆಯ ಕಾರ್ಯ ನಡೆಸುತ್ತಿದೆ.

ಅರಣ್ಯದತ್ತ ತೆರಳಿದ ಆನೆಗಳ ನಡೆ-ನುಡಿಗಳನ್ನು ಪರಿಶೀಲಿಸುತ್ತಿರುವ ಅಧಿಕಾರಿಗಳು, ಅವುಗಳನ್ನು ಅರಣ್ಯದೊಳಗೆ ಹಿಮ್ಮೆಟ್ಟಿಸುವ ಜವಾಬ್ದಾರಿಯನ್ನೂ ಕೈಗೊಂಡಿದ್ದು, ಯಾವುದೇ ಮತ್ತೊಂದು ದುರ್ಘಟನೆ ನಡೆಯದಂತೆ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಈ ಮಧ್ಯೆ, ಕೆಲವು ಅಸಮಾಜಿಕ ಶಕ್ತಿಗಳು ಸೌತಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದು, ಸಾರ್ವಜನಿಕರಲ್ಲಿ ಗೊಂದಲ ಹಾಗೂ ಭಯವನ್ನು ಮೂಡಿಸುತ್ತಿರುವುದಾಗಿ ಅರಣ್ಯ ಇಲಾಖೆ ಹೇಳಿದೆ.

ಸಾರ್ವಜನಿಕರು ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಗಾಗಿ ಅರಣ್ಯ ಇಲಾಖೆಯು ರಚಿಸಿರುವ ವಾಟ್ಸಾಪ್ ಗ್ರೂಪಿಗೆ ಆಧಾರ ವಹಿಸಬೇಕೆಂದು ಮನವಿ ಮಾಡಿದೆ. ಈ ಗ್ರೂಪ್‌ ಮೂಲಕ ಇಲಾಖೆ ಅಧಿಕಾರಿಗಳು ನಿತ್ಯದ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಈ ತುರ್ತು ಕ್ರಮಗಳನ್ನು ಸಾರ್ವಜನಿಕರು ಸಹಕರಿಸುವ ಮೂಲಕ ಪರಿಸ್ಥಿತಿಯನ್ನು ಶಾಂತವಾಗಿ ನಿರ್ವಹಿಸಲು ಸಹಕಾರ ನೀಡಬೇಕೆಂದು ಇಲಾಖೆಯ ಹಿರಿಯ ಅಧಿಕಾರಿಗಳು ಮಾಧ್ಯಮಗಳ ಮೂಲಕ ವಿನಂತಿಸಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!