September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

ಅಂಡಿಂಜೆ: ಗ್ರಾಮ ಪಂಚಾಯತ್ ಅಂಡಿಂಜೆಯಲ್ಲಿ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವು ಜು.18ರಂದು ನಡೆಯಿತು.

ಸಭೆಯ ಅಧ್ಯಕ್ಷ ಸ್ಥಾನವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಎಮ್ ವಹಿಸಿಕೊಂಡಿದ್ದರು.

ಕೃಷಿ ಸಹಾಯಕ ನಿರ್ದೇಶಕ ವೀರಭದ್ರಪ್ಪ ಮಾತನಾಡಿ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕೃಷಿ ಮಿಷನ್ ನಡಿ ಅಂಡಿಂಜೆ ಪಂಚಾಯಿತಿನ ಮೂರು ಗ್ರಾಮಗಳಾದ ಸಾವ್ಯ ,ಕೊಕ್ರಾಡಿ, ಅಂಡಿಂಜೆ ಗ್ರಾಮದ ರೈತರಿಗೆ ಮಾಹಿತಿ ನೀಡಿದರು. ರಾಸಾಯನಿಕಗಳನ್ನು ಹೆಚ್ಚಾಗಿ ಬಳಸದೆ ಆದಷ್ಟು ಸಾವಯವ ಕೃಷಿಯನ್ನು ಬಳಸುವಂತೆ ತಿಳಿಸಿದರು. ಆತ್ಮ ಯೋಜನೆಯ ಸಿಬ್ಬಂದಿ ಅಭಿಲಾಶ್ ಮಾತನಾಡಿ ಇಲಾಖೆಯ ಸೌಲಭ್ಯಗಳ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಎಂ ಮುಂಡೆವು ಇವರು ಮಾತನಾಡಿ ಗ್ರಾಮದ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು. ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್, ಪಂಚಾಯತ್ ಕಾರ್ಯದರ್ಶಿಯಾದ ಶ್ರೀಮತಿ ಚಂಪಾ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶ್ರೀಮತಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು .

ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಶ್ರೀಮತಿ ಆಶಾ , ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ತರಬೇತಿಯಲ್ಲಿ 98 ರೈತರು ಭಾಗವಹಿಸಿದ್ದರು. ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು , ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು. ಕೃಷಿ ಸಖಿ ಶ್ರೀಮತಿ ವತ್ಸಲಾ ಸ್ವಾಗತಿಸಿದರು . ಪಂಚಾಯತ್ ಸಿಬ್ಬಂದಿಯಾದ ಶೀನ ಕಾರ್ಯಕ್ರಮ ನಿರೂಪಣೆ ಮಾಡಿದರು. ಕ್ಲಸ್ಟರ್ ಆದ ಶ್ರೀಮತಿ ನಯನ ಸಹಕರಿಸಿದರು. ಎಲ್ ಸಿ ಆರ್ ಪಿ ಯಾದ ಶ್ರೀಮತಿ ಸುರೇಖಾ ಧನ್ಯವಾದ ನೀಡಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!