July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

ಅಂಡಿಂಜೆ: ಗ್ರಾಮ ಪಂಚಾಯತ್ ಅಂಡಿಂಜೆಯಲ್ಲಿ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವು ಜು.18ರಂದು ನಡೆಯಿತು.

ಸಭೆಯ ಅಧ್ಯಕ್ಷ ಸ್ಥಾನವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಎಮ್ ವಹಿಸಿಕೊಂಡಿದ್ದರು.

ಕೃಷಿ ಸಹಾಯಕ ನಿರ್ದೇಶಕ ವೀರಭದ್ರಪ್ಪ ಮಾತನಾಡಿ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕೃಷಿ ಮಿಷನ್ ನಡಿ ಅಂಡಿಂಜೆ ಪಂಚಾಯಿತಿನ ಮೂರು ಗ್ರಾಮಗಳಾದ ಸಾವ್ಯ ,ಕೊಕ್ರಾಡಿ, ಅಂಡಿಂಜೆ ಗ್ರಾಮದ ರೈತರಿಗೆ ಮಾಹಿತಿ ನೀಡಿದರು. ರಾಸಾಯನಿಕಗಳನ್ನು ಹೆಚ್ಚಾಗಿ ಬಳಸದೆ ಆದಷ್ಟು ಸಾವಯವ ಕೃಷಿಯನ್ನು ಬಳಸುವಂತೆ ತಿಳಿಸಿದರು. ಆತ್ಮ ಯೋಜನೆಯ ಸಿಬ್ಬಂದಿ ಅಭಿಲಾಶ್ ಮಾತನಾಡಿ ಇಲಾಖೆಯ ಸೌಲಭ್ಯಗಳ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಎಂ ಮುಂಡೆವು ಇವರು ಮಾತನಾಡಿ ಗ್ರಾಮದ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು. ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್, ಪಂಚಾಯತ್ ಕಾರ್ಯದರ್ಶಿಯಾದ ಶ್ರೀಮತಿ ಚಂಪಾ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶ್ರೀಮತಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು .

ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಶ್ರೀಮತಿ ಆಶಾ , ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ತರಬೇತಿಯಲ್ಲಿ 98 ರೈತರು ಭಾಗವಹಿಸಿದ್ದರು. ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು , ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು. ಕೃಷಿ ಸಖಿ ಶ್ರೀಮತಿ ವತ್ಸಲಾ ಸ್ವಾಗತಿಸಿದರು . ಪಂಚಾಯತ್ ಸಿಬ್ಬಂದಿಯಾದ ಶೀನ ಕಾರ್ಯಕ್ರಮ ನಿರೂಪಣೆ ಮಾಡಿದರು. ಕ್ಲಸ್ಟರ್ ಆದ ಶ್ರೀಮತಿ ನಯನ ಸಹಕರಿಸಿದರು. ಎಲ್ ಸಿ ಆರ್ ಪಿ ಯಾದ ಶ್ರೀಮತಿ ಸುರೇಖಾ ಧನ್ಯವಾದ ನೀಡಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!