23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

ಬೆಳ್ತಂಗಡಿ: ಭಾರತ ಸರ್ಕಾರದ ಅಮೃತ್ ಮಿತ್ರ 2.0 ಮಿಷನ್ ಅಡಿಯಲ್ಲಿ ಬೆಳ್ತಂಗಡಿ ನಗರ ಪ್ರದೇಶದ ಮಹಿಳಾ ಸ್ವ ಸಹಾಯ ಗುಂಪುಗಳ ಸದಸ್ಯರುಗಳ ಮೂಲಕ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿಯು ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ‌ ಜು.18 ರಂದು ಜರುಗಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಟಿ. ಜಯಾನಂದ ಗೌಡ ರವರು‌ ಅಧ್ಯಕ್ಷತೆ ವಹಿಸಿ ಮಾತನಾಡಿ, “ನಗರ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಯುವ ಮಹಿಳೆಯರ ಜೀವನೋಪಾಯ ಕಂಡು ಕೊಳ್ಳುವುದಕ್ಕೆ ಇದೊಂದು ಹೊಸ ದಿಕ್ಕನ್ನು ತೋರಿಸಿಕೊಟ್ಟ ಹಾಗೆ ಆಗುತ್ತದೆ” ಎಂದು ತಿಳಿಸಿದರು.


ಮುಖ್ಯಾಧಿಕಾರಿ ರಾಜೇಶ್ ಕೆ. ಇವರು “DAY-NULM ಯೋಜನೆ ಅಡಿಯಲ್ಲಿ ರಚನೆಗೊಂಡಿರುವ ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರುಗಳು ಕೊಳವೆ ನೀರಿನ ಮೂಲ ಮತ್ತು ಇತರೆ ಬಿಂದುಗಳಾದ ಬಾವಿಗಳು ಮತ್ತು ತೆರೆದ ಬಾವಿಗಳ ನೀರಿನ ಗುಣಮಟ್ಟ ಪರಿಶೀಲನೆಯ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ನೀರಿನ ಗುಣಮಟ್ಟ ಪರೀಕ್ಷೆಗಾಗಿ ನೀರಿನ ಪರೀಕ್ಷಾ ಕಿಟ್‌ಗಳನ್ನು ಸ್ವ ಸಹಾಯ ಸಂಘಗಳ ಮೂಲಕ ವಿತರಿಸಿ, ನಿತ್ಯ ನೀರಿನ ಮಾದರಿಗಳನ್ನು ಸಂಗ್ರಹಿಸಿ ಫಲಿತಾಂಶಗಳ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.


ಅಚ್ಯುತ ನಾಯ್ಕ್ ಮೂಡುಬಗೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ “AMRUT MITRA (ಅಟಲ್ ಪುನಶ್ಚೇತನ ಮತ್ತು ನಗರ ಪರಿವರ್ತನೆ ಮಿಷನ್) ಅಡಿಯಲ್ಲಿ ಪ್ರತಿ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಆದ್ಯತೆಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರುಗಳ ಭಾಗವಹಿಸುವಿಕೆ ಶ್ಲಾಘನೀಯ ಮತ್ತು ಗಮನಾರ್ಹ” ಎಂದು ತಿಳಿಸಿದರು.

ಸುರೇಖಾ ಮತ್ತು ವಿಶಾಲಾಕ್ಷಿ ಸಮುದಾಯ ಸಂಪನ್ಮೂಲ ವ್ಯಕ್ತಿ ಸೋಮೇಶ್ವರ ಪುರಸಭೆ ಇವರು ತಾಂತ್ರಿಕ ಪ್ರಾತ್ಯಕ್ಷತೆಯ ಮೂಲಕ ತರಬೇತಿ ನೀಡಿದರು. ಮೆಟ್ಟಿಲ್ದಾ ಡಿ’ಕೋಸ್ಟ ಸಮುದಾಯ ಸಂಘಟಕರು ಕಾರ್ಯಕ್ರಮವನ್ನು ಆಯೋಜಿಸಿ, ನಿರ್ವಹಣೆ ಮಾಡಿದರು.

Related posts

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya
error: Content is protected !!