23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತದ ಕೃಷಿ ನಾಟಿ ಗೆ ಸಸಿ ಮಡಿಯನ್ನು ಶ್ರೀ ಕ್ಷೇ, ಧ ,ಗ್ರಾ ಯೋ, ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ರವರು ಗದ್ದೆ ಮನೆಯ ಪ್ರಗತಿಪರ ಕೃಷಿಕ ವಿಶ್ವನಾಥ ರವರಿಗೆ ಹಸ್ತಂತರಿಸಿದರು

ಈ ವೇಳೆ ಮಾತನಾಡಿದ ದಿನೇಶ್ ರವರು ಭತ್ತ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಯುವ ಜನತೆ ಭತ್ತ ಕೃಷಿಯತ್ತ ಆಕರ್ಷಣೆಯಾಗುತ್ತಿದ್ದು,ಇಂದು ಭತ್ತ ಕೃಷಿ ಉಳಿಯಲು ಯಂತ್ರೋಪಕರಣವೇ ಮೂಲ ಆಧಾರವಾಗಿದೆ. ಕೂಲಿಯಾಳುಗಳ ಸಮಸ್ಯೆಯನ್ನು ನಿವಾರಿಸಿ ಇಂದು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಲು,ಕ್ಲಪ್ತ ಸಮಯದಲ್ಲಿ ಉಳುಮೆ ನಾಟಿ, ಕಟಾವಿಗೆ ಯಂತ್ರಗಳ ಪೂರ್ಣವಾದ ಬಳಕೆ ಮಾಡುತ್ತಿರುವುದರಿಂದ ಭತ್ತ ಕೃಷಿಯು ಅತ್ಯಂತ ಸುಲಭದ ಕೃಷಿಯಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಯೋಜನಾಧಿಕಾರಿ ಅಶೋಕ್, ಕೃಷಿ ಮೇಲ್ವಿಚಾರಕರು ಕೃಷ್ಣ, csc ನೋಡಲ್ ಅಧಿಕಾರಿ ಸುರೇಶ, ವಲಯ ಮೇಲ್ವಿಚಾರಕರು ಯಶೋಧ, ಪ್ರಗತಿಪರ ರೈತರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya
error: Content is protected !!