ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತದ ಕೃಷಿ ನಾಟಿ ಗೆ ಸಸಿ ಮಡಿಯನ್ನು ಶ್ರೀ ಕ್ಷೇ, ಧ ,ಗ್ರಾ ಯೋ, ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ರವರು ಗದ್ದೆ ಮನೆಯ ಪ್ರಗತಿಪರ ಕೃಷಿಕ ವಿಶ್ವನಾಥ ರವರಿಗೆ ಹಸ್ತಂತರಿಸಿದರು

ಈ ವೇಳೆ ಮಾತನಾಡಿದ ದಿನೇಶ್ ರವರು ಭತ್ತ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಯುವ ಜನತೆ ಭತ್ತ ಕೃಷಿಯತ್ತ ಆಕರ್ಷಣೆಯಾಗುತ್ತಿದ್ದು,ಇಂದು ಭತ್ತ ಕೃಷಿ ಉಳಿಯಲು ಯಂತ್ರೋಪಕರಣವೇ ಮೂಲ ಆಧಾರವಾಗಿದೆ. ಕೂಲಿಯಾಳುಗಳ ಸಮಸ್ಯೆಯನ್ನು ನಿವಾರಿಸಿ ಇಂದು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಲು,ಕ್ಲಪ್ತ ಸಮಯದಲ್ಲಿ ಉಳುಮೆ ನಾಟಿ, ಕಟಾವಿಗೆ ಯಂತ್ರಗಳ ಪೂರ್ಣವಾದ ಬಳಕೆ ಮಾಡುತ್ತಿರುವುದರಿಂದ ಭತ್ತ ಕೃಷಿಯು ಅತ್ಯಂತ ಸುಲಭದ ಕೃಷಿಯಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಯೋಜನಾಧಿಕಾರಿ ಅಶೋಕ್, ಕೃಷಿ ಮೇಲ್ವಿಚಾರಕರು ಕೃಷ್ಣ, csc ನೋಡಲ್ ಅಧಿಕಾರಿ ಸುರೇಶ, ವಲಯ ಮೇಲ್ವಿಚಾರಕರು ಯಶೋಧ, ಪ್ರಗತಿಪರ ರೈತರು ಉಪಸ್ಥಿತರಿದ್ದರು

Related posts

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya
error: Content is protected !!