July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ ಕೌಶಲ್ಯ ವಿಷಯದ ಕುರಿತು ಮಾತನಾಡುತ್ತಾ, ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಪೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ ಭಿತ್ತಿ ಪತ್ರಿಕೆ’ ಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸನಾ ಶರಿನಾ ಪಿಂಟೋ ಸ್ವಾಗತಿಸಿದರು. ಅಭಿಜ್ಞಾ ಧನ್ಯವಾದವಿತ್ತರು. ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!