September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ ಕೌಶಲ್ಯ ವಿಷಯದ ಕುರಿತು ಮಾತನಾಡುತ್ತಾ, ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಪೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ ಭಿತ್ತಿ ಪತ್ರಿಕೆ’ ಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸನಾ ಶರಿನಾ ಪಿಂಟೋ ಸ್ವಾಗತಿಸಿದರು. ಅಭಿಜ್ಞಾ ಧನ್ಯವಾದವಿತ್ತರು. ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!