July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

ಕೊಕ್ಕಡ: ಕೊಕ್ಕಡ ಗ್ರಾಮ ವ್ಯಾಪ್ತಿಯ ಸೌತಡ್ಕದಲ್ಲಿ ಜು. 17 ರಂದು ಸಂಭವಿಸಿದ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಳಿಕ ಅರಣ್ಯ ಇಲಾಖೆ ಗಂಭೀರವಾಗಿ ಕ್ರಮ ಕೈಗೊಂಡಿದ್ದು, ಸ್ಥಳದಲ್ಲಿಯೇ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನಿಯೋಜಿಸಿ 24 ಗಂಟೆಯ ಪರಿವೀಕ್ಷಣೆಯ ಕಾರ್ಯ ನಡೆಸುತ್ತಿದೆ.

ಅರಣ್ಯದತ್ತ ತೆರಳಿದ ಆನೆಗಳ ನಡೆ-ನುಡಿಗಳನ್ನು ಪರಿಶೀಲಿಸುತ್ತಿರುವ ಅಧಿಕಾರಿಗಳು, ಅವುಗಳನ್ನು ಅರಣ್ಯದೊಳಗೆ ಹಿಮ್ಮೆಟ್ಟಿಸುವ ಜವಾಬ್ದಾರಿಯನ್ನೂ ಕೈಗೊಂಡಿದ್ದು, ಯಾವುದೇ ಮತ್ತೊಂದು ದುರ್ಘಟನೆ ನಡೆಯದಂತೆ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಈ ಮಧ್ಯೆ, ಕೆಲವು ಅಸಮಾಜಿಕ ಶಕ್ತಿಗಳು ಸೌತಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದು, ಸಾರ್ವಜನಿಕರಲ್ಲಿ ಗೊಂದಲ ಹಾಗೂ ಭಯವನ್ನು ಮೂಡಿಸುತ್ತಿರುವುದಾಗಿ ಅರಣ್ಯ ಇಲಾಖೆ ಹೇಳಿದೆ.

ಸಾರ್ವಜನಿಕರು ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಗಾಗಿ ಅರಣ್ಯ ಇಲಾಖೆಯು ರಚಿಸಿರುವ ವಾಟ್ಸಾಪ್ ಗ್ರೂಪಿಗೆ ಆಧಾರ ವಹಿಸಬೇಕೆಂದು ಮನವಿ ಮಾಡಿದೆ. ಈ ಗ್ರೂಪ್‌ ಮೂಲಕ ಇಲಾಖೆ ಅಧಿಕಾರಿಗಳು ನಿತ್ಯದ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಈ ತುರ್ತು ಕ್ರಮಗಳನ್ನು ಸಾರ್ವಜನಿಕರು ಸಹಕರಿಸುವ ಮೂಲಕ ಪರಿಸ್ಥಿತಿಯನ್ನು ಶಾಂತವಾಗಿ ನಿರ್ವಹಿಸಲು ಸಹಕಾರ ನೀಡಬೇಕೆಂದು ಇಲಾಖೆಯ ಹಿರಿಯ ಅಧಿಕಾರಿಗಳು ಮಾಧ್ಯಮಗಳ ಮೂಲಕ ವಿನಂತಿಸಿದ್ದಾರೆ.

Related posts

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya
error: Content is protected !!