25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು. 19ರಂದು ರಸ್ತೆ ಸಂಚಾರ ನಿಯಮ ಹಾಗೂ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ವಹಿಸಿದ್ದರು. ಈ ಸಂದರ್ಭದಲ್ಲಿ ಮೊದಲಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ತಿಳಿ ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆದ ಅರ್ಜುನ್ ಎಚ್. ಕೆ. ಇವರು ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಿ ಯಾವ ರೀತಿ ಮುಂಜಾಗ್ರತಾ ಕ್ರಮವನ್ನು ವಹಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಸಹ ಶಿಕ್ಷಕ ರವಿಕುಮಾರ್ ಶ್ರೀಮತಿ ಫಿಲೋಮಿನಾ ಹಾಗೂ ಇತರರು ಉಪಸ್ಥಿತರಿದ್ದರು. ಸಹ ಶಿಕ್ಷಕಿಯಾದ ಶ್ರೀಮತಿ ನಿಶಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದಗಳು ಅರ್ಪಿಸಿದರು.

Related posts

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya
error: Content is protected !!