July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು. 19ರಂದು ರಸ್ತೆ ಸಂಚಾರ ನಿಯಮ ಹಾಗೂ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ವಹಿಸಿದ್ದರು. ಈ ಸಂದರ್ಭದಲ್ಲಿ ಮೊದಲಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ತಿಳಿ ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆದ ಅರ್ಜುನ್ ಎಚ್. ಕೆ. ಇವರು ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಿ ಯಾವ ರೀತಿ ಮುಂಜಾಗ್ರತಾ ಕ್ರಮವನ್ನು ವಹಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಸಹ ಶಿಕ್ಷಕ ರವಿಕುಮಾರ್ ಶ್ರೀಮತಿ ಫಿಲೋಮಿನಾ ಹಾಗೂ ಇತರರು ಉಪಸ್ಥಿತರಿದ್ದರು. ಸಹ ಶಿಕ್ಷಕಿಯಾದ ಶ್ರೀಮತಿ ನಿಶಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದಗಳು ಅರ್ಪಿಸಿದರು.

Related posts

ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಪಟ್ರಮೆ: ಮೋನಮ್ಮ ನಿಧನ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya
error: Content is protected !!