September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಪುಂಜಾಲಕಟ್ಟೆ: ಸುಮಾರು 65 ವರ್ಷದ ಹನುಮಂತಪ್ಪ ಎಂಬ ಹೆಸರಿನ ಅಪರಿಚಿತ ವ್ಯಕ್ತಿಯು ತಣ್ಣೀರುಪಂತ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಜು.16ರಂದು ನಿಧನರಾಗಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು 6 ವಾರಗಳ ಹಿಂದೆ ಉಪ್ಪಿನಂಗಡಿ ಬಸ್ಸು ನಿಲ್ದಾಣದ ಬಳಿ ಕಾಣಸಿಕ್ಕ ಹನುಮಂತಪ್ಪ ಎಂಬ ಹೆಸರಿನ ಸುಮಾರು 65 ವರ್ಷ ಪ್ರಾಯದ ವ್ಯಕ್ತಿ ಜು.16 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಚಿಕಿತ್ಸೆಯ ಬಗ್ಗೆ 108 ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದ್ದವರು ಜು.16 ರಂದು ರಾತ್ರಿ ಮಂಗಳೂರು ಜಿಲ್ಲಾ ಸರಕಾರಿ ವೆನಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಗದಗ, ಬಾಗಲಕೋಟೆ ನಿವಾಸಿ ಎಂದು ಗುರುತಿಸಲಾಗಿದೆ.

ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶೀತಲಿಕರಣ ಶವಾಗಾರದಲ್ಲಿ ಇರಿಸಲಾಗಿದೆ. ಆದುದರಿಂದ ಮೃತ ವ್ಯಕ್ತಿಯ ವಾರೀಸುದಾರರ ಪತ್ತಯಾದ್ದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಸಂಪರ್ಕಕ್ಕಾಗಿ 8277986416, 8277986417, 9480805336

Related posts

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ವಿದೇಶಕ್ಕೆ ಎಸ್ಕೇಪ್

Suddi Udaya

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya
error: Content is protected !!