25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ.


ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದ ಕೂಡಲೇ ತೋಟಗಳಿಗೆ ನುಗ್ಗುತ್ತಿವೆ.
ಜು.18 ರಾತ್ರಿಯ ವೇಳೆ ಇಲ್ಲಿನ ನಿವಾಸಿ ಟಿ.ವಿ ದೇವಸ್ಯ ಎಂಬವರ ಮನೆಯ ಸಮೀಪಕ್ಕೆ ಬಂದ ಕಾಡಾನೆಗಳು ಇಲ್ಲಿ ಕೃಷಿ ಮಾಡಿದ್ದ ಮರಗೆಣಸಿನ ಗಿಡಗಳನ್ನು ಸಂಪೂರ್ಣ ನಾಶಗೈದಿದೆ. ಬಾಲೆ ಹಾಗೂ ಇತರ ಕೃಷಿಗೂ ಹಾನಿಯುಂಟಾಗಿದೆ.
ಸಮೀಪದ ವಿಲ್ಸನ್ ಟಿ.ವಿ ಅವರ ತೋಟಕ್ಕೂ ನುಗ್ಗಿದ್ದು ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಗೊಳಿಸಿದೆ. ಇಲ್ಲಿನ ನಿವಾಸಿ ವಿಲ್ಸನ್ ಎಂಬವರ ಮನೆಯ ಹಿಂಬದಿಯ ಅಂಗಳದವರೆಗೂ ಕಾಡಾನೆ ಬಂದಿದ್ದು ತೋಟದಲ್ಲಿ ಸಂಪೂರ್ಣ ನಾಶಗೊಳಿಸಿದೆ. ಕ್ಸೇವಿಯರ್, ಶ್ರೀನಿವಾಸ ಅವರ ತೋಟಗಳಲ್ಲಿಯು ಕೃಷಿಗೆ ಹಾನಿಯುಂಟುಮಾಡಿದೆ. ಆನೆ ಹೋದ ದಾರಿಯಲ್ಲೆಲ್ಲ ಹಲವರ ತೋಟಗಳಲ್ಲಿ ಕೃಷಿಗಳನ್ನು ನಾಶಗೊಳಿಸುತ್ತಾ ಸಾಗಿದೆ.


ಸಂಜೆಯ ವೇಳೆಗೆ ಧರ್ಮಸ್ಥಳ ದಿಂದ ನೇರ್ತನೆಗೆ ಹೋಗುವ ರಸ್ತೆಯ ಬದಿಯಲ್ಲಿ ಕಲ್ಲೇರಿ ಸಮೀಪವೇ ಕಾಡನೆ ಕಾಣಿಸಿಕೊಳ್ಳುತ್ತಿದೆ. ಪ್ರತಿನಿತ್ಯ ಶಾಲಾ ಮಕ್ಕಳು ಸೇರಿದಂತೆ ನೂರಾರು ಜನರು ಓಡಾಡುವ ರಸ್ತೆಯ ಬದಿಯಲ್ಲಿಯೇ ಕಾಡಾನೆ ಕಾಣಿಸುತ್ತಿರುವುದು ಜನರಲ್ಲಿ ಆತಂಕ‌ಮೂಡಿಸಲು ಕಾರಣವಾಗಿದೆ.

Related posts

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya
error: Content is protected !!