ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

ಬೆಳ್ತಂಗಡಿ: ಸಂಜೀವಿನಿ – ಎನ್.ಆರ್.ಎಲ್.ಎಮ್ ತಾಲೂಕು ಅಭಿಯಾನ ನಿರ್ವಹಣಾ ಘಟಕ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಎಲ್.ಸಿ.ಆರ್.ಪಿ) ಸ್ವಸಹಾಯ ಸಂಘಗಳ ವಹಿವಾಟುಗಳನ್ನು ಲೋಕೋಸ್ ತಂತ್ರಾಂಶದಲ್ಲಿ ದಾಖಲಿಸುವ ಕುರಿತು ತರಬೇತಿ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜು. 14 ರಿಂದ 17 ವರೆಗೆ ನಡೆಯಿತು.

ಬೆಳ್ತಂಗಡಿ ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಟಿ.ಎಮ್.ಐ.ಎಸ್ ವಿನೋದ್ ಪ್ರಸಾದ್ ಕಲ್ಲಾಜೆ ಲೋಕೋಸ್ ತಂತ್ರಾಂಶದ ಬಳಕೆ, ವಹಿವಾಟುಗಳ ದಾಖಲೀಕರಣ ಕುರಿತು ತರಬೇತಿ ನೀಡಿದರು. ಬೆಳ್ತಂಗಡಿ ತಾಲೂಕಿನ 48 ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ 98 ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು 49 ಜನರ ಎರಡು ತಂಡವಾಗಿ ತಲಾ 02 ದಿನದಂತೆ 04 ದಿನಗಳಲ್ಲಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬೆಳ್ತಂಗಡಿ ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಾಷ್ಟ್ರೀಯ ಶ್ರೀಮತಿ ಪ್ರತಿಮಾ, ತಾಲೂಕು ವ್ಯವಸ್ಥಾಪಕರು ಕೃಷಿಯೇತರ ನಿತೀಶ್, ವಲಯ ಮೇಲ್ವಿಚಾರರಾದ ಜಯಾನಂದ್, ಸ್ವಸ್ತಿಕ್, ಶ್ರೀಮತಿ ವೀಣಾಶ್ರೀ ಕೆ.ಕೆ, ಬಿ.ಆರ್.ಪಿ ಶ್ರೀಮತಿ ಶ್ರೀಕಲಾ ತರಬೇತಿಯ ಯಶಸ್ಸಿಗೆ ಸಹಕರಿಸಿದರು.

Related posts

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ‘ಹೊಸಬೆಳಕು’ ಒಕ್ಕೂಟದ ಉದ್ಘಾಟನೆ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!