25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಧಮ೯ಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮೇಳದಲ್ಲಿ ಹಿರಿಯ ಕಲಾವಿದರಾಗಿದ್ದ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92 ವ) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ನಿಧನ ಹೊಂದಿದರು.

ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ ವೇಷಗಳನ್ನು ಮಾಡಿ ಭಾವಾಭಿನಯ ಮತ್ತು ನೃತ್ಯ ಲಾಲಿತ್ಯಗಳಿಂದ ವೈವಿಧ್ಯಮಯ ವೇಷಗಳಲ್ಲಿ ಮೆರೆದ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟರು. ಪುತ್ತೂರು ಕೃಷ್ಣಭಟ್ಟರಿಂದ ತೆಂಕುತಿಟ್ಟಿನ ಅಭ್ಯಾಸ ಮಾಡಿದ್ದ ವೆಂಕಟರಮಣ ಭಟ್ಟರು, ಬಳಿಕ ಮೂಲ್ಕಿ ಮೇಳ, ಸುರತ್ಕಲ್ ಮೇಳ, ಸೌಕೂರು ಮೇಳ, ಧರ್ಮಸ್ಥಳದ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ನಡೆಸಿದ್ದರು. ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ಸುಭದ್ರೆ, ದೌಪದಿ, ಮೀನಾಕ್ಷಿ, ಸ್ವಯಂಪ್ರಭೆಯಂತಹ ಪಾತ್ರಗಳಿಗೆ ತನ್ನದೇ ಆದ ಮೆರುಗು ನೀಡಿದ್ದ ಪಾತಾಳರು ಬೇಲೂರಿನ ಶಿಲಾ ಬಾಲಿಕೆಯರ ಅಂಗಭಂಗಿಗಳನ್ನು ಬೇಲೂರಿಗೆ ಹೋಗಿ ಸ್ವತಃ ಅಭ್ಯಸಿಸಿ ಯಕ್ಷಗಾನದಲ್ಲಿ ಅಳವಡಿಸಿದವರು.

ಪಾತಾಳ ವೆಂಕಟರಮಣ ಭಟ್ಟರಿಗೆ ಚೆನ್ನೈನ ಹಿಂದೂಧರ್ಮ ಸಂಘವು ಮಣಿವಿಳಾ ಬಿರುದು ನೀಡಿ ಗೌರವಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ, ವಿಟ್ಲ ಗೋಪಾಲಕೃಷ್ಣ ಭಟ್ ಪ್ರತಿಷ್ಟಾನ ಪ್ರಶಸ್ತಿ, ವಿದ್ಯಾಮಾನ್ಯ ಪ್ರಶಸ್ತಿ, ಯಕ್ಷ ಕಲಾನಿಧಿ ಪ್ರಶಸ್ತಿ, ಅಗರಿ ಪ್ರಶಸ್ತಿ, ಕರಾವಳಿ ಯಕ್ಷಗಾನ ಮಂಡಳಿ, ಬಿ.ಬಿ.ಶೆಟ್ಟಿ ಪ್ರಶಸ್ತಿ, ಪಟ್ಟಾಜೆ ಪ್ರಶಸ್ತಿ, ದೇರಾಜೆ ಪ್ರಶಸ್ತಿ, ಕಲ್ಕೂರ ಪ್ರಶಸ್ತಿ ಸೇರಿ ಹಲವು ಗೌರವಗಳು ಸಂದಿದೆ.

Related posts

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya
error: Content is protected !!