23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

ಕಾಯರ್ತಡ್ಕ : ಇಲ್ಲಿಯ ಸರಕಾರಿ ಪ್ರೌಢಶಾಲೆಯದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮವನ್ನು ಜು.19 ರಂದು ನಡೆಸಲಾಯಿತು. ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಸೂಚನೆಯಂತೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಯುವ ನ್ಯಾಯವಾದಿ ವಿನಯ್ ಎಂ ಜಾರ್ಜ್ ಇವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಂವಿಧಾನದಲ್ಲಿ ಮಕ್ಕಳಿಗೆ ನೀಡಿರುವ ಹಕ್ಕುಗಳ ಬಗ್ಗೆ ವಿವರಿಸಿದ ಅವರು ಬಾಲ ನ್ಯಾಯ ಕಾಯಿದೆ -2025, ಫೋಸ್ಕೋ ಕಾಯಿದೆ, ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯಿದೆ, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ ಹಾಗೂ ಬಾಲ್ಯ ವಿವಾಹ ನಿಷೇದ ಇವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸ್ವಾಗತಗೈದ ಮುಖ್ಯಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ನೋಡಲ್ ಶಿಕ್ಷಕ ಆನಂದ ಆಪ್ಟೆ ಇವರು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಮಾಹಿತಿ ನೀಡಿದರು. ಹಿರಿಯ ಶಿಕ್ಷಕ ವಿನಾಯಕ ಜೋಶಿ ಧನ್ಯವಾದ ಸಲ್ಲಿಸಿದರು.

Related posts

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya
error: Content is protected !!