23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ.


ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದ ಕೂಡಲೇ ತೋಟಗಳಿಗೆ ನುಗ್ಗುತ್ತಿವೆ.
ಜು.18 ರಾತ್ರಿಯ ವೇಳೆ ಇಲ್ಲಿನ ನಿವಾಸಿ ಟಿ.ವಿ ದೇವಸ್ಯ ಎಂಬವರ ಮನೆಯ ಸಮೀಪಕ್ಕೆ ಬಂದ ಕಾಡಾನೆಗಳು ಇಲ್ಲಿ ಕೃಷಿ ಮಾಡಿದ್ದ ಮರಗೆಣಸಿನ ಗಿಡಗಳನ್ನು ಸಂಪೂರ್ಣ ನಾಶಗೈದಿದೆ. ಬಾಲೆ ಹಾಗೂ ಇತರ ಕೃಷಿಗೂ ಹಾನಿಯುಂಟಾಗಿದೆ.
ಸಮೀಪದ ವಿಲ್ಸನ್ ಟಿ.ವಿ ಅವರ ತೋಟಕ್ಕೂ ನುಗ್ಗಿದ್ದು ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಗೊಳಿಸಿದೆ. ಇಲ್ಲಿನ ನಿವಾಸಿ ವಿಲ್ಸನ್ ಎಂಬವರ ಮನೆಯ ಹಿಂಬದಿಯ ಅಂಗಳದವರೆಗೂ ಕಾಡಾನೆ ಬಂದಿದ್ದು ತೋಟದಲ್ಲಿ ಸಂಪೂರ್ಣ ನಾಶಗೊಳಿಸಿದೆ. ಕ್ಸೇವಿಯರ್, ಶ್ರೀನಿವಾಸ ಅವರ ತೋಟಗಳಲ್ಲಿಯು ಕೃಷಿಗೆ ಹಾನಿಯುಂಟುಮಾಡಿದೆ. ಆನೆ ಹೋದ ದಾರಿಯಲ್ಲೆಲ್ಲ ಹಲವರ ತೋಟಗಳಲ್ಲಿ ಕೃಷಿಗಳನ್ನು ನಾಶಗೊಳಿಸುತ್ತಾ ಸಾಗಿದೆ.


ಸಂಜೆಯ ವೇಳೆಗೆ ಧರ್ಮಸ್ಥಳ ದಿಂದ ನೇರ್ತನೆಗೆ ಹೋಗುವ ರಸ್ತೆಯ ಬದಿಯಲ್ಲಿ ಕಲ್ಲೇರಿ ಸಮೀಪವೇ ಕಾಡನೆ ಕಾಣಿಸಿಕೊಳ್ಳುತ್ತಿದೆ. ಪ್ರತಿನಿತ್ಯ ಶಾಲಾ ಮಕ್ಕಳು ಸೇರಿದಂತೆ ನೂರಾರು ಜನರು ಓಡಾಡುವ ರಸ್ತೆಯ ಬದಿಯಲ್ಲಿಯೇ ಕಾಡಾನೆ ಕಾಣಿಸುತ್ತಿರುವುದು ಜನರಲ್ಲಿ ಆತಂಕ‌ಮೂಡಿಸಲು ಕಾರಣವಾಗಿದೆ.

Related posts

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya
error: Content is protected !!