July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ.


ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದ ಕೂಡಲೇ ತೋಟಗಳಿಗೆ ನುಗ್ಗುತ್ತಿವೆ.
ಜು.18 ರಾತ್ರಿಯ ವೇಳೆ ಇಲ್ಲಿನ ನಿವಾಸಿ ಟಿ.ವಿ ದೇವಸ್ಯ ಎಂಬವರ ಮನೆಯ ಸಮೀಪಕ್ಕೆ ಬಂದ ಕಾಡಾನೆಗಳು ಇಲ್ಲಿ ಕೃಷಿ ಮಾಡಿದ್ದ ಮರಗೆಣಸಿನ ಗಿಡಗಳನ್ನು ಸಂಪೂರ್ಣ ನಾಶಗೈದಿದೆ. ಬಾಲೆ ಹಾಗೂ ಇತರ ಕೃಷಿಗೂ ಹಾನಿಯುಂಟಾಗಿದೆ.
ಸಮೀಪದ ವಿಲ್ಸನ್ ಟಿ.ವಿ ಅವರ ತೋಟಕ್ಕೂ ನುಗ್ಗಿದ್ದು ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಗೊಳಿಸಿದೆ. ಇಲ್ಲಿನ ನಿವಾಸಿ ವಿಲ್ಸನ್ ಎಂಬವರ ಮನೆಯ ಹಿಂಬದಿಯ ಅಂಗಳದವರೆಗೂ ಕಾಡಾನೆ ಬಂದಿದ್ದು ತೋಟದಲ್ಲಿ ಸಂಪೂರ್ಣ ನಾಶಗೊಳಿಸಿದೆ. ಕ್ಸೇವಿಯರ್, ಶ್ರೀನಿವಾಸ ಅವರ ತೋಟಗಳಲ್ಲಿಯು ಕೃಷಿಗೆ ಹಾನಿಯುಂಟುಮಾಡಿದೆ. ಆನೆ ಹೋದ ದಾರಿಯಲ್ಲೆಲ್ಲ ಹಲವರ ತೋಟಗಳಲ್ಲಿ ಕೃಷಿಗಳನ್ನು ನಾಶಗೊಳಿಸುತ್ತಾ ಸಾಗಿದೆ.


ಸಂಜೆಯ ವೇಳೆಗೆ ಧರ್ಮಸ್ಥಳ ದಿಂದ ನೇರ್ತನೆಗೆ ಹೋಗುವ ರಸ್ತೆಯ ಬದಿಯಲ್ಲಿ ಕಲ್ಲೇರಿ ಸಮೀಪವೇ ಕಾಡನೆ ಕಾಣಿಸಿಕೊಳ್ಳುತ್ತಿದೆ. ಪ್ರತಿನಿತ್ಯ ಶಾಲಾ ಮಕ್ಕಳು ಸೇರಿದಂತೆ ನೂರಾರು ಜನರು ಓಡಾಡುವ ರಸ್ತೆಯ ಬದಿಯಲ್ಲಿಯೇ ಕಾಡಾನೆ ಕಾಣಿಸುತ್ತಿರುವುದು ಜನರಲ್ಲಿ ಆತಂಕ‌ಮೂಡಿಸಲು ಕಾರಣವಾಗಿದೆ.

Related posts

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya
error: Content is protected !!