September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ.


ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದ ಕೂಡಲೇ ತೋಟಗಳಿಗೆ ನುಗ್ಗುತ್ತಿವೆ.
ಜು.18 ರಾತ್ರಿಯ ವೇಳೆ ಇಲ್ಲಿನ ನಿವಾಸಿ ಟಿ.ವಿ ದೇವಸ್ಯ ಎಂಬವರ ಮನೆಯ ಸಮೀಪಕ್ಕೆ ಬಂದ ಕಾಡಾನೆಗಳು ಇಲ್ಲಿ ಕೃಷಿ ಮಾಡಿದ್ದ ಮರಗೆಣಸಿನ ಗಿಡಗಳನ್ನು ಸಂಪೂರ್ಣ ನಾಶಗೈದಿದೆ. ಬಾಲೆ ಹಾಗೂ ಇತರ ಕೃಷಿಗೂ ಹಾನಿಯುಂಟಾಗಿದೆ.
ಸಮೀಪದ ವಿಲ್ಸನ್ ಟಿ.ವಿ ಅವರ ತೋಟಕ್ಕೂ ನುಗ್ಗಿದ್ದು ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಗೊಳಿಸಿದೆ. ಇಲ್ಲಿನ ನಿವಾಸಿ ವಿಲ್ಸನ್ ಎಂಬವರ ಮನೆಯ ಹಿಂಬದಿಯ ಅಂಗಳದವರೆಗೂ ಕಾಡಾನೆ ಬಂದಿದ್ದು ತೋಟದಲ್ಲಿ ಸಂಪೂರ್ಣ ನಾಶಗೊಳಿಸಿದೆ. ಕ್ಸೇವಿಯರ್, ಶ್ರೀನಿವಾಸ ಅವರ ತೋಟಗಳಲ್ಲಿಯು ಕೃಷಿಗೆ ಹಾನಿಯುಂಟುಮಾಡಿದೆ. ಆನೆ ಹೋದ ದಾರಿಯಲ್ಲೆಲ್ಲ ಹಲವರ ತೋಟಗಳಲ್ಲಿ ಕೃಷಿಗಳನ್ನು ನಾಶಗೊಳಿಸುತ್ತಾ ಸಾಗಿದೆ.


ಸಂಜೆಯ ವೇಳೆಗೆ ಧರ್ಮಸ್ಥಳ ದಿಂದ ನೇರ್ತನೆಗೆ ಹೋಗುವ ರಸ್ತೆಯ ಬದಿಯಲ್ಲಿ ಕಲ್ಲೇರಿ ಸಮೀಪವೇ ಕಾಡನೆ ಕಾಣಿಸಿಕೊಳ್ಳುತ್ತಿದೆ. ಪ್ರತಿನಿತ್ಯ ಶಾಲಾ ಮಕ್ಕಳು ಸೇರಿದಂತೆ ನೂರಾರು ಜನರು ಓಡಾಡುವ ರಸ್ತೆಯ ಬದಿಯಲ್ಲಿಯೇ ಕಾಡಾನೆ ಕಾಣಿಸುತ್ತಿರುವುದು ಜನರಲ್ಲಿ ಆತಂಕ‌ಮೂಡಿಸಲು ಕಾರಣವಾಗಿದೆ.

Related posts

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
error: Content is protected !!