25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ.


ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದ ಕೂಡಲೇ ತೋಟಗಳಿಗೆ ನುಗ್ಗುತ್ತಿವೆ.
ಜು.18 ರಾತ್ರಿಯ ವೇಳೆ ಇಲ್ಲಿನ ನಿವಾಸಿ ಟಿ.ವಿ ದೇವಸ್ಯ ಎಂಬವರ ಮನೆಯ ಸಮೀಪಕ್ಕೆ ಬಂದ ಕಾಡಾನೆಗಳು ಇಲ್ಲಿ ಕೃಷಿ ಮಾಡಿದ್ದ ಮರಗೆಣಸಿನ ಗಿಡಗಳನ್ನು ಸಂಪೂರ್ಣ ನಾಶಗೈದಿದೆ. ಬಾಲೆ ಹಾಗೂ ಇತರ ಕೃಷಿಗೂ ಹಾನಿಯುಂಟಾಗಿದೆ.
ಸಮೀಪದ ವಿಲ್ಸನ್ ಟಿ.ವಿ ಅವರ ತೋಟಕ್ಕೂ ನುಗ್ಗಿದ್ದು ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಗೊಳಿಸಿದೆ. ಇಲ್ಲಿನ ನಿವಾಸಿ ವಿಲ್ಸನ್ ಎಂಬವರ ಮನೆಯ ಹಿಂಬದಿಯ ಅಂಗಳದವರೆಗೂ ಕಾಡಾನೆ ಬಂದಿದ್ದು ತೋಟದಲ್ಲಿ ಸಂಪೂರ್ಣ ನಾಶಗೊಳಿಸಿದೆ. ಕ್ಸೇವಿಯರ್, ಶ್ರೀನಿವಾಸ ಅವರ ತೋಟಗಳಲ್ಲಿಯು ಕೃಷಿಗೆ ಹಾನಿಯುಂಟುಮಾಡಿದೆ. ಆನೆ ಹೋದ ದಾರಿಯಲ್ಲೆಲ್ಲ ಹಲವರ ತೋಟಗಳಲ್ಲಿ ಕೃಷಿಗಳನ್ನು ನಾಶಗೊಳಿಸುತ್ತಾ ಸಾಗಿದೆ.


ಸಂಜೆಯ ವೇಳೆಗೆ ಧರ್ಮಸ್ಥಳ ದಿಂದ ನೇರ್ತನೆಗೆ ಹೋಗುವ ರಸ್ತೆಯ ಬದಿಯಲ್ಲಿ ಕಲ್ಲೇರಿ ಸಮೀಪವೇ ಕಾಡನೆ ಕಾಣಿಸಿಕೊಳ್ಳುತ್ತಿದೆ. ಪ್ರತಿನಿತ್ಯ ಶಾಲಾ ಮಕ್ಕಳು ಸೇರಿದಂತೆ ನೂರಾರು ಜನರು ಓಡಾಡುವ ರಸ್ತೆಯ ಬದಿಯಲ್ಲಿಯೇ ಕಾಡಾನೆ ಕಾಣಿಸುತ್ತಿರುವುದು ಜನರಲ್ಲಿ ಆತಂಕ‌ಮೂಡಿಸಲು ಕಾರಣವಾಗಿದೆ.

Related posts

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!