22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜು ಪ್ರಾಂಶುಪಾಲರಾದ ಸುಕುಮಾರ್ ಜೈನ್ ಅಧ್ಯಕ್ಷತೆಯಲ್ಲಿ ಜು.19 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಜರುಗಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ದೀಪ ಪ್ರಜ್ವಲಿಸಿ ಮಾತನಾಡಿ ಬೆಳ್ತಂಗಡಿ ಸರಕಾರಿ ಕಾಲೇಜು ಶಿಸ್ತಿಗೆ ಆಧ್ಯಾತೆಯನ್ನು ನೀಡುತ್ತಿದ್ದು, ಅನುಭವವುಳ್ಳ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ನಿವೃತ್ತ ಎಸ್ ಪಿ ಪೀತಾ0ಬರ ಹೇರಾಜೆ, ಸುವರ್ಣ ಮಹೋತ್ಸವದ ಅಧ್ಯಕ್ಷರು, ವಕೀಲರು ಧನಂಜಯ್ ರಾವ್, ಹಿರಿಯ ಉಪನ್ಯಾಸಕರಾದ ಆನಂದ, ಸುವರ್ಣ ಕುಮಾರಿ, ವಿದ್ಯಾರ್ಥಿ ಸಂಘದ ನಾಯಕರುಗಳು ಉಪಸ್ಥಿತರಿದ್ದರು.

18 ಕನ್ನಡ ಶತಕ ಸಾಧಕರು, 4 ಇತಿಹಾಸ ಶತಕ ಸಾಧಕರು, 1 ಗಣಿತ ಶಾಸ್ತ್ರ ಹಾಗೂ 1 ವ್ಯವಹಾರ ಶತಕ ಸಾಧಕರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ ಗಣೇಶ್ & ಅಮೃತ ರಶ್ಮಿ ರವರಿಗೆ ಶತಕ ಪ್ರೇರಣಾ ಪುರಸ್ಕಾರ, ಆನಂದ & ಮೋಹನ್ ರವರಿಗೆ ಶತಕ ಪೋಷಕರು ಪುರಸ್ಕಾರ, ದೀಪಶ್ರೀ ರವರಿಗೆ ಶತಕ ಪ್ರೇರಕಿ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಪ್ರಾಂಶುಪಾಲ ಸುಕುಮಾರ್ ಜೈನ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿನಿಯರಾದ ಕೀರ್ತನಾ ಸ್ವಾಗತಿಸಿ, ಮನ್ವಿತಾ ನಿರೂಪಿಸಿದರು. ಪ್ಲೇವಿಟಾ ವಂದಿಸಿದರು.

Related posts

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya
error: Content is protected !!