September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜು ಪ್ರಾಂಶುಪಾಲರಾದ ಸುಕುಮಾರ್ ಜೈನ್ ಅಧ್ಯಕ್ಷತೆಯಲ್ಲಿ ಜು.19 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಜರುಗಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ದೀಪ ಪ್ರಜ್ವಲಿಸಿ ಮಾತನಾಡಿ ಬೆಳ್ತಂಗಡಿ ಸರಕಾರಿ ಕಾಲೇಜು ಶಿಸ್ತಿಗೆ ಆಧ್ಯಾತೆಯನ್ನು ನೀಡುತ್ತಿದ್ದು, ಅನುಭವವುಳ್ಳ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ನಿವೃತ್ತ ಎಸ್ ಪಿ ಪೀತಾ0ಬರ ಹೇರಾಜೆ, ಸುವರ್ಣ ಮಹೋತ್ಸವದ ಅಧ್ಯಕ್ಷರು, ವಕೀಲರು ಧನಂಜಯ್ ರಾವ್, ಹಿರಿಯ ಉಪನ್ಯಾಸಕರಾದ ಆನಂದ, ಸುವರ್ಣ ಕುಮಾರಿ, ವಿದ್ಯಾರ್ಥಿ ಸಂಘದ ನಾಯಕರುಗಳು ಉಪಸ್ಥಿತರಿದ್ದರು.

18 ಕನ್ನಡ ಶತಕ ಸಾಧಕರು, 4 ಇತಿಹಾಸ ಶತಕ ಸಾಧಕರು, 1 ಗಣಿತ ಶಾಸ್ತ್ರ ಹಾಗೂ 1 ವ್ಯವಹಾರ ಶತಕ ಸಾಧಕರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ ಗಣೇಶ್ & ಅಮೃತ ರಶ್ಮಿ ರವರಿಗೆ ಶತಕ ಪ್ರೇರಣಾ ಪುರಸ್ಕಾರ, ಆನಂದ & ಮೋಹನ್ ರವರಿಗೆ ಶತಕ ಪೋಷಕರು ಪುರಸ್ಕಾರ, ದೀಪಶ್ರೀ ರವರಿಗೆ ಶತಕ ಪ್ರೇರಕಿ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಪ್ರಾಂಶುಪಾಲ ಸುಕುಮಾರ್ ಜೈನ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿನಿಯರಾದ ಕೀರ್ತನಾ ಸ್ವಾಗತಿಸಿ, ಮನ್ವಿತಾ ನಿರೂಪಿಸಿದರು. ಪ್ಲೇವಿಟಾ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya
error: Content is protected !!