22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಧಮ೯ಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮೇಳದಲ್ಲಿ ಹಿರಿಯ ಕಲಾವಿದರಾಗಿದ್ದ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92 ವ) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ನಿಧನ ಹೊಂದಿದರು.

ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ ವೇಷಗಳನ್ನು ಮಾಡಿ ಭಾವಾಭಿನಯ ಮತ್ತು ನೃತ್ಯ ಲಾಲಿತ್ಯಗಳಿಂದ ವೈವಿಧ್ಯಮಯ ವೇಷಗಳಲ್ಲಿ ಮೆರೆದ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟರು. ಪುತ್ತೂರು ಕೃಷ್ಣಭಟ್ಟರಿಂದ ತೆಂಕುತಿಟ್ಟಿನ ಅಭ್ಯಾಸ ಮಾಡಿದ್ದ ವೆಂಕಟರಮಣ ಭಟ್ಟರು, ಬಳಿಕ ಮೂಲ್ಕಿ ಮೇಳ, ಸುರತ್ಕಲ್ ಮೇಳ, ಸೌಕೂರು ಮೇಳ, ಧರ್ಮಸ್ಥಳದ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ನಡೆಸಿದ್ದರು. ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ಸುಭದ್ರೆ, ದೌಪದಿ, ಮೀನಾಕ್ಷಿ, ಸ್ವಯಂಪ್ರಭೆಯಂತಹ ಪಾತ್ರಗಳಿಗೆ ತನ್ನದೇ ಆದ ಮೆರುಗು ನೀಡಿದ್ದ ಪಾತಾಳರು ಬೇಲೂರಿನ ಶಿಲಾ ಬಾಲಿಕೆಯರ ಅಂಗಭಂಗಿಗಳನ್ನು ಬೇಲೂರಿಗೆ ಹೋಗಿ ಸ್ವತಃ ಅಭ್ಯಸಿಸಿ ಯಕ್ಷಗಾನದಲ್ಲಿ ಅಳವಡಿಸಿದವರು.

ಪಾತಾಳ ವೆಂಕಟರಮಣ ಭಟ್ಟರಿಗೆ ಚೆನ್ನೈನ ಹಿಂದೂಧರ್ಮ ಸಂಘವು ಮಣಿವಿಳಾ ಬಿರುದು ನೀಡಿ ಗೌರವಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ, ವಿಟ್ಲ ಗೋಪಾಲಕೃಷ್ಣ ಭಟ್ ಪ್ರತಿಷ್ಟಾನ ಪ್ರಶಸ್ತಿ, ವಿದ್ಯಾಮಾನ್ಯ ಪ್ರಶಸ್ತಿ, ಯಕ್ಷ ಕಲಾನಿಧಿ ಪ್ರಶಸ್ತಿ, ಅಗರಿ ಪ್ರಶಸ್ತಿ, ಕರಾವಳಿ ಯಕ್ಷಗಾನ ಮಂಡಳಿ, ಬಿ.ಬಿ.ಶೆಟ್ಟಿ ಪ್ರಶಸ್ತಿ, ಪಟ್ಟಾಜೆ ಪ್ರಶಸ್ತಿ, ದೇರಾಜೆ ಪ್ರಶಸ್ತಿ, ಕಲ್ಕೂರ ಪ್ರಶಸ್ತಿ ಸೇರಿ ಹಲವು ಗೌರವಗಳು ಸಂದಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!