23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಧಮ೯ಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮೇಳದಲ್ಲಿ ಹಿರಿಯ ಕಲಾವಿದರಾಗಿದ್ದ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92 ವ) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ನಿಧನ ಹೊಂದಿದರು.

ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ ವೇಷಗಳನ್ನು ಮಾಡಿ ಭಾವಾಭಿನಯ ಮತ್ತು ನೃತ್ಯ ಲಾಲಿತ್ಯಗಳಿಂದ ವೈವಿಧ್ಯಮಯ ವೇಷಗಳಲ್ಲಿ ಮೆರೆದ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟರು. ಪುತ್ತೂರು ಕೃಷ್ಣಭಟ್ಟರಿಂದ ತೆಂಕುತಿಟ್ಟಿನ ಅಭ್ಯಾಸ ಮಾಡಿದ್ದ ವೆಂಕಟರಮಣ ಭಟ್ಟರು, ಬಳಿಕ ಮೂಲ್ಕಿ ಮೇಳ, ಸುರತ್ಕಲ್ ಮೇಳ, ಸೌಕೂರು ಮೇಳ, ಧರ್ಮಸ್ಥಳದ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ನಡೆಸಿದ್ದರು. ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ಸುಭದ್ರೆ, ದೌಪದಿ, ಮೀನಾಕ್ಷಿ, ಸ್ವಯಂಪ್ರಭೆಯಂತಹ ಪಾತ್ರಗಳಿಗೆ ತನ್ನದೇ ಆದ ಮೆರುಗು ನೀಡಿದ್ದ ಪಾತಾಳರು ಬೇಲೂರಿನ ಶಿಲಾ ಬಾಲಿಕೆಯರ ಅಂಗಭಂಗಿಗಳನ್ನು ಬೇಲೂರಿಗೆ ಹೋಗಿ ಸ್ವತಃ ಅಭ್ಯಸಿಸಿ ಯಕ್ಷಗಾನದಲ್ಲಿ ಅಳವಡಿಸಿದವರು.

ಪಾತಾಳ ವೆಂಕಟರಮಣ ಭಟ್ಟರಿಗೆ ಚೆನ್ನೈನ ಹಿಂದೂಧರ್ಮ ಸಂಘವು ಮಣಿವಿಳಾ ಬಿರುದು ನೀಡಿ ಗೌರವಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ, ವಿಟ್ಲ ಗೋಪಾಲಕೃಷ್ಣ ಭಟ್ ಪ್ರತಿಷ್ಟಾನ ಪ್ರಶಸ್ತಿ, ವಿದ್ಯಾಮಾನ್ಯ ಪ್ರಶಸ್ತಿ, ಯಕ್ಷ ಕಲಾನಿಧಿ ಪ್ರಶಸ್ತಿ, ಅಗರಿ ಪ್ರಶಸ್ತಿ, ಕರಾವಳಿ ಯಕ್ಷಗಾನ ಮಂಡಳಿ, ಬಿ.ಬಿ.ಶೆಟ್ಟಿ ಪ್ರಶಸ್ತಿ, ಪಟ್ಟಾಜೆ ಪ್ರಶಸ್ತಿ, ದೇರಾಜೆ ಪ್ರಶಸ್ತಿ, ಕಲ್ಕೂರ ಪ್ರಶಸ್ತಿ ಸೇರಿ ಹಲವು ಗೌರವಗಳು ಸಂದಿದೆ.

Related posts

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya
error: Content is protected !!