March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಪುಂಜಾಲಕಟ್ಟೆ: ಸುಮಾರು 65 ವರ್ಷದ ಹನುಮಂತಪ್ಪ ಎಂಬ ಹೆಸರಿನ ಅಪರಿಚಿತ ವ್ಯಕ್ತಿಯು ತಣ್ಣೀರುಪಂತ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಜು.16ರಂದು ನಿಧನರಾಗಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು 6 ವಾರಗಳ ಹಿಂದೆ ಉಪ್ಪಿನಂಗಡಿ ಬಸ್ಸು ನಿಲ್ದಾಣದ ಬಳಿ ಕಾಣಸಿಕ್ಕ ಹನುಮಂತಪ್ಪ ಎಂಬ ಹೆಸರಿನ ಸುಮಾರು 65 ವರ್ಷ ಪ್ರಾಯದ ವ್ಯಕ್ತಿ ಜು.16 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಚಿಕಿತ್ಸೆಯ ಬಗ್ಗೆ 108 ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದ್ದವರು ಜು.16 ರಂದು ರಾತ್ರಿ ಮಂಗಳೂರು ಜಿಲ್ಲಾ ಸರಕಾರಿ ವೆನಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಗದಗ, ಬಾಗಲಕೋಟೆ ನಿವಾಸಿ ಎಂದು ಗುರುತಿಸಲಾಗಿದೆ.

ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶೀತಲಿಕರಣ ಶವಾಗಾರದಲ್ಲಿ ಇರಿಸಲಾಗಿದೆ. ಆದುದರಿಂದ ಮೃತ ವ್ಯಕ್ತಿಯ ವಾರೀಸುದಾರರ ಪತ್ತಯಾದ್ದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಸಂಪರ್ಕಕ್ಕಾಗಿ 8277986416, 8277986417, 9480805336

Related posts

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya
error: Content is protected !!