September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಪುಂಜಾಲಕಟ್ಟೆ: ಸುಮಾರು 65 ವರ್ಷದ ಹನುಮಂತಪ್ಪ ಎಂಬ ಹೆಸರಿನ ಅಪರಿಚಿತ ವ್ಯಕ್ತಿಯು ತಣ್ಣೀರುಪಂತ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಜು.16ರಂದು ನಿಧನರಾಗಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು 6 ವಾರಗಳ ಹಿಂದೆ ಉಪ್ಪಿನಂಗಡಿ ಬಸ್ಸು ನಿಲ್ದಾಣದ ಬಳಿ ಕಾಣಸಿಕ್ಕ ಹನುಮಂತಪ್ಪ ಎಂಬ ಹೆಸರಿನ ಸುಮಾರು 65 ವರ್ಷ ಪ್ರಾಯದ ವ್ಯಕ್ತಿ ಜು.16 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಚಿಕಿತ್ಸೆಯ ಬಗ್ಗೆ 108 ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದ್ದವರು ಜು.16 ರಂದು ರಾತ್ರಿ ಮಂಗಳೂರು ಜಿಲ್ಲಾ ಸರಕಾರಿ ವೆನಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಗದಗ, ಬಾಗಲಕೋಟೆ ನಿವಾಸಿ ಎಂದು ಗುರುತಿಸಲಾಗಿದೆ.

ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶೀತಲಿಕರಣ ಶವಾಗಾರದಲ್ಲಿ ಇರಿಸಲಾಗಿದೆ. ಆದುದರಿಂದ ಮೃತ ವ್ಯಕ್ತಿಯ ವಾರೀಸುದಾರರ ಪತ್ತಯಾದ್ದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಸಂಪರ್ಕಕ್ಕಾಗಿ 8277986416, 8277986417, 9480805336

Related posts

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya
error: Content is protected !!