25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಪುಂಜಾಲಕಟ್ಟೆ: ಸುಮಾರು 65 ವರ್ಷದ ಹನುಮಂತಪ್ಪ ಎಂಬ ಹೆಸರಿನ ಅಪರಿಚಿತ ವ್ಯಕ್ತಿಯು ತಣ್ಣೀರುಪಂತ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಜು.16ರಂದು ನಿಧನರಾಗಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು 6 ವಾರಗಳ ಹಿಂದೆ ಉಪ್ಪಿನಂಗಡಿ ಬಸ್ಸು ನಿಲ್ದಾಣದ ಬಳಿ ಕಾಣಸಿಕ್ಕ ಹನುಮಂತಪ್ಪ ಎಂಬ ಹೆಸರಿನ ಸುಮಾರು 65 ವರ್ಷ ಪ್ರಾಯದ ವ್ಯಕ್ತಿ ಜು.16 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ರುದ್ರಗಿರಿ ಎಂಬಲ್ಲಿ ಅಸ್ವಸ್ಥರಾಗಿ ಬಿದ್ದು ಕೊಂಡಿದವರನ್ನು ಚಿಕಿತ್ಸೆಯ ಬಗ್ಗೆ 108 ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದ್ದವರು ಜು.16 ರಂದು ರಾತ್ರಿ ಮಂಗಳೂರು ಜಿಲ್ಲಾ ಸರಕಾರಿ ವೆನಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಗದಗ, ಬಾಗಲಕೋಟೆ ನಿವಾಸಿ ಎಂದು ಗುರುತಿಸಲಾಗಿದೆ.

ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶೀತಲಿಕರಣ ಶವಾಗಾರದಲ್ಲಿ ಇರಿಸಲಾಗಿದೆ. ಆದುದರಿಂದ ಮೃತ ವ್ಯಕ್ತಿಯ ವಾರೀಸುದಾರರ ಪತ್ತಯಾದ್ದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಸಂಪರ್ಕಕ್ಕಾಗಿ 8277986416, 8277986417, 9480805336

Related posts

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya
error: Content is protected !!