July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

ಉಜಿರೆ: ಸಮಯವನ್ನು ಖರೀದಿಸಲು ಸಾಧ್ಯವಿಲ್ಲ. ಸೃಜನಶೀಲತೆ ಮತ್ತು ಸಮಯದ ಸದುಪಯೋಗ ಪಡೆದುಕೊಂಡರೆ ಶಿಕ್ಷಣದಲ್ಲಿ ಕ್ರಾಂತಿ ನಡೆಸಲು ಸಾಧ್ಯವಾಗುತ್ತದೆ. ಕಲಿಕೆಯಿಂದ ಮಾತ್ರ ಗಳಿಕೆ ಸಾಧ್ಯ ಶಕ್ತಿ ಮತ್ತು ಯುಕ್ತಿಯು ವ್ಯಕ್ತಿಯ ಸಮಗ್ರ ಅಭಿವೃದ್ಧಿ ಪೂರಕವಾಗಿದೆ. ಸಣ್ಣ ಸಣ್ಣ ವಿಷಯಗಳಿಗೆ ಮನಸ್ಸು ನೀಡಿ ಸರಿಯಾದ ದಾರಿಯಲ್ಲಿ ನಡೆದರೆ, ವಿದ್ಯಾರ್ಥಿ ಜೀವನ ಸಾರ್ಥಕತೆ ಪಡೆಯುವುದು. ಮನಸ್ಸು ಹತೋಟಿಯಲ್ಲಿ ಇದ್ದರೆ ದೈಹಿಕ ಸಾಮರ್ಥ್ಯದಿಂದ ಯಶಸ್ಸು ಖಂಡಿತ ಸಾಧ್ಯ. ಕಷ್ಟ ಪಟ್ಟರೆ ಜೀವನ ಸಾರ್ಥಕತೆ ಪಡೆಯುತ್ತದೆ, ಎಂದು ಸಾಣೂರಿನ ವಿದ್ಯಾರಶ್ಮಿ ಮಹಾವಿದ್ಯಾಲಯದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿನ್ ಎಲ್ ಶೆಟ್ಟಿ ತಿಳಿಸಿದರು.

ಅವರು ಇಂದು (ಜುಲೈ 19) ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಲಿಕೆಯು ಕಬ್ಬಿಣದ ಕಡಲೆ ಅಲ್ಲ. ಸಂತಸದ ಕಲಿಕೆ ಉತ್ತಮ ಫಲಿತಾಂಶ ಪಡೆಯಲು ಸಹಾಯ ಮಾಡುತ್ತದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಯುವಜನತೆ ಅಭಾವ ಇದ್ದು, ಪ್ರಪಂಚವು ಈಗಿನ ಯುವಜನರ ನಿರೀಕ್ಷೆಯಲ್ಲಿ ಇದೆ. ಜ್ಞಾನ ಶಕ್ತಿ ಇದ್ದಂತೆ. ಇದೇ ಶಕ್ತಿಯು ವ್ಯಕ್ತಿಯನ್ನು ಸ್ವಾವಲಂಬಿಯನ್ನಾಗಿ ಮತ್ತು ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡುತ್ತದೆ. ಭಯವನ್ನು ಅರ್ಥೈಸಿ ಸಾಹಸಕ್ಕೆ ಪ್ರಯತ್ನಿಸಿದರೆ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯವಾಗುತ್ತದೆ. ನಕಾರಾತ್ಮಕ ಚಿಂತನೆಗಳಿಗೆ ಅವಕಾಶ ಕಲ್ಪಿಸದೆ, ಜೀವನವನ್ನು ಅನುಭವಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ತರಗತಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಭೋದಿಸಿ ಮಾತನಾಡಿದ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಸಹಾಯ ಮಾಡುತ್ತದೆ. ಸಂವಹನ ಕಲೆ ಅತೀ ಮುಖ್ಯ, ಇದರಿಂದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸ್ವಚ್ಚತಾ ಸೇನನಿಗಳಿಗೆ ಕಾಲೇಜಿನ ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ ಪ್ರಮಾಣ ವಚನ ಬೋಧಿಸಿದರು.

ಇದೇ ಸಂದರ್ಭದಲ್ಲಿ ೨೦೨೪-೨೫ ಶೈಕ್ಷಣಿಕ ವರ್ಷದಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4 ನೇ ಸ್ಥಾನ, ಜಿಲ್ಲೆಗೆ 2 ನೇ, ಹಾಗೂ ತಾಲೂಕು ಮತ್ತು ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ತುಷಾರ ಇವರನ್ನು ಅಭಿನಂದಿಸಲಾಯಿತು.

ತರಗತಿ ಪ್ರತಿನಿಧಿ ಅಮೂಲ್ಯ ಪ್ರಭು ಸ್ವಾಗತಿಸಿ, ಸುಮಿತ್ ವಂದಿಸಿದರು. ಕಾರ್ಯಕ್ರಮವನ್ನು ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಹಂಸಿನಿ ಭಿಡೆ ಮತ್ತು ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಧರೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya
error: Content is protected !!