23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ.


ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದ ಕೂಡಲೇ ತೋಟಗಳಿಗೆ ನುಗ್ಗುತ್ತಿವೆ.
ಜು.18 ರಾತ್ರಿಯ ವೇಳೆ ಇಲ್ಲಿನ ನಿವಾಸಿ ಟಿ.ವಿ ದೇವಸ್ಯ ಎಂಬವರ ಮನೆಯ ಸಮೀಪಕ್ಕೆ ಬಂದ ಕಾಡಾನೆಗಳು ಇಲ್ಲಿ ಕೃಷಿ ಮಾಡಿದ್ದ ಮರಗೆಣಸಿನ ಗಿಡಗಳನ್ನು ಸಂಪೂರ್ಣ ನಾಶಗೈದಿದೆ. ಬಾಲೆ ಹಾಗೂ ಇತರ ಕೃಷಿಗೂ ಹಾನಿಯುಂಟಾಗಿದೆ.
ಸಮೀಪದ ವಿಲ್ಸನ್ ಟಿ.ವಿ ಅವರ ತೋಟಕ್ಕೂ ನುಗ್ಗಿದ್ದು ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಗೊಳಿಸಿದೆ. ಇಲ್ಲಿನ ನಿವಾಸಿ ವಿಲ್ಸನ್ ಎಂಬವರ ಮನೆಯ ಹಿಂಬದಿಯ ಅಂಗಳದವರೆಗೂ ಕಾಡಾನೆ ಬಂದಿದ್ದು ತೋಟದಲ್ಲಿ ಸಂಪೂರ್ಣ ನಾಶಗೊಳಿಸಿದೆ. ಕ್ಸೇವಿಯರ್, ಶ್ರೀನಿವಾಸ ಅವರ ತೋಟಗಳಲ್ಲಿಯು ಕೃಷಿಗೆ ಹಾನಿಯುಂಟುಮಾಡಿದೆ. ಆನೆ ಹೋದ ದಾರಿಯಲ್ಲೆಲ್ಲ ಹಲವರ ತೋಟಗಳಲ್ಲಿ ಕೃಷಿಗಳನ್ನು ನಾಶಗೊಳಿಸುತ್ತಾ ಸಾಗಿದೆ.


ಸಂಜೆಯ ವೇಳೆಗೆ ಧರ್ಮಸ್ಥಳ ದಿಂದ ನೇರ್ತನೆಗೆ ಹೋಗುವ ರಸ್ತೆಯ ಬದಿಯಲ್ಲಿ ಕಲ್ಲೇರಿ ಸಮೀಪವೇ ಕಾಡನೆ ಕಾಣಿಸಿಕೊಳ್ಳುತ್ತಿದೆ. ಪ್ರತಿನಿತ್ಯ ಶಾಲಾ ಮಕ್ಕಳು ಸೇರಿದಂತೆ ನೂರಾರು ಜನರು ಓಡಾಡುವ ರಸ್ತೆಯ ಬದಿಯಲ್ಲಿಯೇ ಕಾಡಾನೆ ಕಾಣಿಸುತ್ತಿರುವುದು ಜನರಲ್ಲಿ ಆತಂಕ‌ಮೂಡಿಸಲು ಕಾರಣವಾಗಿದೆ.

Related posts

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!