July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ.


ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದ ಕೂಡಲೇ ತೋಟಗಳಿಗೆ ನುಗ್ಗುತ್ತಿವೆ.
ಜು.18 ರಾತ್ರಿಯ ವೇಳೆ ಇಲ್ಲಿನ ನಿವಾಸಿ ಟಿ.ವಿ ದೇವಸ್ಯ ಎಂಬವರ ಮನೆಯ ಸಮೀಪಕ್ಕೆ ಬಂದ ಕಾಡಾನೆಗಳು ಇಲ್ಲಿ ಕೃಷಿ ಮಾಡಿದ್ದ ಮರಗೆಣಸಿನ ಗಿಡಗಳನ್ನು ಸಂಪೂರ್ಣ ನಾಶಗೈದಿದೆ. ಬಾಲೆ ಹಾಗೂ ಇತರ ಕೃಷಿಗೂ ಹಾನಿಯುಂಟಾಗಿದೆ.
ಸಮೀಪದ ವಿಲ್ಸನ್ ಟಿ.ವಿ ಅವರ ತೋಟಕ್ಕೂ ನುಗ್ಗಿದ್ದು ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಗೊಳಿಸಿದೆ. ಇಲ್ಲಿನ ನಿವಾಸಿ ವಿಲ್ಸನ್ ಎಂಬವರ ಮನೆಯ ಹಿಂಬದಿಯ ಅಂಗಳದವರೆಗೂ ಕಾಡಾನೆ ಬಂದಿದ್ದು ತೋಟದಲ್ಲಿ ಸಂಪೂರ್ಣ ನಾಶಗೊಳಿಸಿದೆ. ಕ್ಸೇವಿಯರ್, ಶ್ರೀನಿವಾಸ ಅವರ ತೋಟಗಳಲ್ಲಿಯು ಕೃಷಿಗೆ ಹಾನಿಯುಂಟುಮಾಡಿದೆ. ಆನೆ ಹೋದ ದಾರಿಯಲ್ಲೆಲ್ಲ ಹಲವರ ತೋಟಗಳಲ್ಲಿ ಕೃಷಿಗಳನ್ನು ನಾಶಗೊಳಿಸುತ್ತಾ ಸಾಗಿದೆ.


ಸಂಜೆಯ ವೇಳೆಗೆ ಧರ್ಮಸ್ಥಳ ದಿಂದ ನೇರ್ತನೆಗೆ ಹೋಗುವ ರಸ್ತೆಯ ಬದಿಯಲ್ಲಿ ಕಲ್ಲೇರಿ ಸಮೀಪವೇ ಕಾಡನೆ ಕಾಣಿಸಿಕೊಳ್ಳುತ್ತಿದೆ. ಪ್ರತಿನಿತ್ಯ ಶಾಲಾ ಮಕ್ಕಳು ಸೇರಿದಂತೆ ನೂರಾರು ಜನರು ಓಡಾಡುವ ರಸ್ತೆಯ ಬದಿಯಲ್ಲಿಯೇ ಕಾಡಾನೆ ಕಾಣಿಸುತ್ತಿರುವುದು ಜನರಲ್ಲಿ ಆತಂಕ‌ಮೂಡಿಸಲು ಕಾರಣವಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು : ಸುನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya
error: Content is protected !!