25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜು ಪ್ರಾಂಶುಪಾಲರಾದ ಸುಕುಮಾರ್ ಜೈನ್ ಅಧ್ಯಕ್ಷತೆಯಲ್ಲಿ ಜು.19 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಜರುಗಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ದೀಪ ಪ್ರಜ್ವಲಿಸಿ ಮಾತನಾಡಿ ಬೆಳ್ತಂಗಡಿ ಸರಕಾರಿ ಕಾಲೇಜು ಶಿಸ್ತಿಗೆ ಆಧ್ಯಾತೆಯನ್ನು ನೀಡುತ್ತಿದ್ದು, ಅನುಭವವುಳ್ಳ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ನಿವೃತ್ತ ಎಸ್ ಪಿ ಪೀತಾ0ಬರ ಹೇರಾಜೆ, ಸುವರ್ಣ ಮಹೋತ್ಸವದ ಅಧ್ಯಕ್ಷರು, ವಕೀಲರು ಧನಂಜಯ್ ರಾವ್, ಹಿರಿಯ ಉಪನ್ಯಾಸಕರಾದ ಆನಂದ, ಸುವರ್ಣ ಕುಮಾರಿ, ವಿದ್ಯಾರ್ಥಿ ಸಂಘದ ನಾಯಕರುಗಳು ಉಪಸ್ಥಿತರಿದ್ದರು.

18 ಕನ್ನಡ ಶತಕ ಸಾಧಕರು, 4 ಇತಿಹಾಸ ಶತಕ ಸಾಧಕರು, 1 ಗಣಿತ ಶಾಸ್ತ್ರ ಹಾಗೂ 1 ವ್ಯವಹಾರ ಶತಕ ಸಾಧಕರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ ಗಣೇಶ್ & ಅಮೃತ ರಶ್ಮಿ ರವರಿಗೆ ಶತಕ ಪ್ರೇರಣಾ ಪುರಸ್ಕಾರ, ಆನಂದ & ಮೋಹನ್ ರವರಿಗೆ ಶತಕ ಪೋಷಕರು ಪುರಸ್ಕಾರ, ದೀಪಶ್ರೀ ರವರಿಗೆ ಶತಕ ಪ್ರೇರಕಿ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಪ್ರಾಂಶುಪಾಲ ಸುಕುಮಾರ್ ಜೈನ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿನಿಯರಾದ ಕೀರ್ತನಾ ಸ್ವಾಗತಿಸಿ, ಮನ್ವಿತಾ ನಿರೂಪಿಸಿದರು. ಪ್ಲೇವಿಟಾ ವಂದಿಸಿದರು.

Related posts

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

Suddi Udaya

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!