ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

ಬೆಳ್ತಂಗಡಿ: ಸಂಜೀವಿನಿ – ಎನ್.ಆರ್.ಎಲ್.ಎಮ್ ತಾಲೂಕು ಅಭಿಯಾನ ನಿರ್ವಹಣಾ ಘಟಕ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಎಲ್.ಸಿ.ಆರ್.ಪಿ) ಸ್ವಸಹಾಯ ಸಂಘಗಳ ವಹಿವಾಟುಗಳನ್ನು ಲೋಕೋಸ್ ತಂತ್ರಾಂಶದಲ್ಲಿ ದಾಖಲಿಸುವ ಕುರಿತು ತರಬೇತಿ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜು. 14 ರಿಂದ 17 ವರೆಗೆ ನಡೆಯಿತು.

ಬೆಳ್ತಂಗಡಿ ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಟಿ.ಎಮ್.ಐ.ಎಸ್ ವಿನೋದ್ ಪ್ರಸಾದ್ ಕಲ್ಲಾಜೆ ಲೋಕೋಸ್ ತಂತ್ರಾಂಶದ ಬಳಕೆ, ವಹಿವಾಟುಗಳ ದಾಖಲೀಕರಣ ಕುರಿತು ತರಬೇತಿ ನೀಡಿದರು. ಬೆಳ್ತಂಗಡಿ ತಾಲೂಕಿನ 48 ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ 98 ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು 49 ಜನರ ಎರಡು ತಂಡವಾಗಿ ತಲಾ 02 ದಿನದಂತೆ 04 ದಿನಗಳಲ್ಲಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬೆಳ್ತಂಗಡಿ ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಾಷ್ಟ್ರೀಯ ಶ್ರೀಮತಿ ಪ್ರತಿಮಾ, ತಾಲೂಕು ವ್ಯವಸ್ಥಾಪಕರು ಕೃಷಿಯೇತರ ನಿತೀಶ್, ವಲಯ ಮೇಲ್ವಿಚಾರರಾದ ಜಯಾನಂದ್, ಸ್ವಸ್ತಿಕ್, ಶ್ರೀಮತಿ ವೀಣಾಶ್ರೀ ಕೆ.ಕೆ, ಬಿ.ಆರ್.ಪಿ ಶ್ರೀಮತಿ ಶ್ರೀಕಲಾ ತರಬೇತಿಯ ಯಶಸ್ಸಿಗೆ ಸಹಕರಿಸಿದರು.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಕಾಡ್ಗಿಚ್ಚು, ಹುಲಿ ಗಣತಿ ಹಿನ್ನೆಲೆ ಪ್ರವಾಸಿಗರ ಸಂಚಾರಕ್ಕೆ ವಿಧಿಸಿದ್ದ ನಿಷೇಧ ತೆರವು: ಜೂ.1 ರಿಂದ ಪ್ರವಾಸಿಗರಿಗೆ ಚಾರಣ, ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!