23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಧಮ೯ಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮೇಳದಲ್ಲಿ ಹಿರಿಯ ಕಲಾವಿದರಾಗಿದ್ದ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92 ವ) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ನಿಧನ ಹೊಂದಿದರು.

ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ ವೇಷಗಳನ್ನು ಮಾಡಿ ಭಾವಾಭಿನಯ ಮತ್ತು ನೃತ್ಯ ಲಾಲಿತ್ಯಗಳಿಂದ ವೈವಿಧ್ಯಮಯ ವೇಷಗಳಲ್ಲಿ ಮೆರೆದ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟರು. ಪುತ್ತೂರು ಕೃಷ್ಣಭಟ್ಟರಿಂದ ತೆಂಕುತಿಟ್ಟಿನ ಅಭ್ಯಾಸ ಮಾಡಿದ್ದ ವೆಂಕಟರಮಣ ಭಟ್ಟರು, ಬಳಿಕ ಮೂಲ್ಕಿ ಮೇಳ, ಸುರತ್ಕಲ್ ಮೇಳ, ಸೌಕೂರು ಮೇಳ, ಧರ್ಮಸ್ಥಳದ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ನಡೆಸಿದ್ದರು. ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ಸುಭದ್ರೆ, ದೌಪದಿ, ಮೀನಾಕ್ಷಿ, ಸ್ವಯಂಪ್ರಭೆಯಂತಹ ಪಾತ್ರಗಳಿಗೆ ತನ್ನದೇ ಆದ ಮೆರುಗು ನೀಡಿದ್ದ ಪಾತಾಳರು ಬೇಲೂರಿನ ಶಿಲಾ ಬಾಲಿಕೆಯರ ಅಂಗಭಂಗಿಗಳನ್ನು ಬೇಲೂರಿಗೆ ಹೋಗಿ ಸ್ವತಃ ಅಭ್ಯಸಿಸಿ ಯಕ್ಷಗಾನದಲ್ಲಿ ಅಳವಡಿಸಿದವರು.

ಪಾತಾಳ ವೆಂಕಟರಮಣ ಭಟ್ಟರಿಗೆ ಚೆನ್ನೈನ ಹಿಂದೂಧರ್ಮ ಸಂಘವು ಮಣಿವಿಳಾ ಬಿರುದು ನೀಡಿ ಗೌರವಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ, ವಿಟ್ಲ ಗೋಪಾಲಕೃಷ್ಣ ಭಟ್ ಪ್ರತಿಷ್ಟಾನ ಪ್ರಶಸ್ತಿ, ವಿದ್ಯಾಮಾನ್ಯ ಪ್ರಶಸ್ತಿ, ಯಕ್ಷ ಕಲಾನಿಧಿ ಪ್ರಶಸ್ತಿ, ಅಗರಿ ಪ್ರಶಸ್ತಿ, ಕರಾವಳಿ ಯಕ್ಷಗಾನ ಮಂಡಳಿ, ಬಿ.ಬಿ.ಶೆಟ್ಟಿ ಪ್ರಶಸ್ತಿ, ಪಟ್ಟಾಜೆ ಪ್ರಶಸ್ತಿ, ದೇರಾಜೆ ಪ್ರಶಸ್ತಿ, ಕಲ್ಕೂರ ಪ್ರಶಸ್ತಿ ಸೇರಿ ಹಲವು ಗೌರವಗಳು ಸಂದಿದೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya
error: Content is protected !!