September 6, 2026
ಗ್ರಾಮಾಂತರ ಸುದ್ದಿ

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

ಇಳಂತಿಲ :ಕಳೆದ ಜುಲೈ 17 ರಂದು ಅಕಾಲಿಕ ಮರಣ ಹೊಂದಿದ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಇತ್ತೀಚೆಗೆ ಮರಣ ಹೊಂದಿದ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ ಕಾರ್ಯಕ್ರಮ ಜುಲೈ 18 ರಂದು ಇಳಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ನುಡಿನಮನ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಭಾಗವಹಿಸಿ ಅಗಲಿದ ನಾಯಕರುಗಳಿಗೆ ಪುಷ್ಪ ನಮನ ಸಲ್ಲಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸವಿತಾ ಅಧ್ಯಕ್ಷತೆ ವಹಿಸಿದ್ದರು.

ನುಡಿ ನಮನ ಸಲ್ಲಿಸಿ ಮಾತನಾಡಿದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ರವರು ವಸಂತ ಶೆಟ್ಟಿಯವರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಜಾತಿ, ಮತ, ಪಕ್ಷ ಬೇಧ ಮರೆತು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದರು. ಅದೇ ರೀತಿ ಸೌಂಡ್ಸ್ ಮತ್ತು ಲೈಟಿಂಗ್ಸ್ ವ್ಯವಹಾರ ಮಾಡುತ್ತಿದ್ದ ಅವರಿಗೆ ಹಲವಾರು ಗ್ರಾಹಕರು ಹಣ ನೀಡಲು ಬಾಕಿ ಇರುವುದಾಗಿ ತಿಳಿದು ಬಂದಿದ್ದು ಅಂತಹವರು ಅವರ ಬಾಕಿ ಹಣವನ್ನು ಅವರ ಮನೆಯವರಿಗೆ ನೀಡುವ ಮೂಲಕ ಅವರ ಮನೆಯವರ ಕಷ್ಟಕ್ಕೆ ನೆರವಾಗಬೇಕೆಂದು ವಿನಂತಿಸಿದರು.

ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಿಕಾ ಭಟ್ ರವರು ಮಾತನಾಡುತ್ತಾ ಕಳೆದ ವರ್ಷ ಮರಣ ಹೊಂದಿದ ಸದಸ್ಯರಾಗಿದ್ದ ರೇಖಾ ಅಂತರ, ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿಯವರ ಅಕಾಲಿಕ ಮರಣ ನಮ್ಮ ಗ್ರಾಮ ಪಂಚಾಯತ್ ಗೆ ತುಂಬಲಾರದ ನಷ್ಟ ಉಂಟಾಗಿದ್ದು ಅಗಲಿದ ದಿವ್ಯ ಆತ್ಮಗಳಿಗೆ ಚಿರ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದರು.

ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ಪನ್ಯ ಶಂಕರ ಭಟ್, ಯು ಕೆ ಇಸುಬು, ಗ್ರಾಮ ಪಂಚಾಯತ್ ಕಾರ್ಯದರ್ಶಿ ವಿಜಯ, ಬಿ, ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಈಶ್ವರ ಭಟ್, ಉಪ್ಪಿನಂಗಡಿ ಸಿ ಎ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ ವಿ ಪ್ರಸಾದ್, ಇಂಜಿನಿಯರ್ ಗಫೂರ್ ಸಾಬ್, ಜನಾರ್ಧನ ಗೌಡ, ಅಣ್ಣಾಜೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಸುಮತಿ ನೂಜ, ಶಂಕರ ಭಟ್ , ನಿಡ್ಡಾಜೆ, ಗ್ರಾಮ ಪಂಚಾಯತ್ ಸಿಬಂದಿ ಸುಂದರ ನಾಯ್ಕ ಮುಂತಾದವರು ನುಡಿ ನಮನ ಸಲ್ಲಿಸಿದರು. ಮೃತರ ಆತ್ಮಕ್ಕೆ ಶಾಂತಿ ಕೋರಿ 1 ನಿಮಿಷದ ಮೌನ ಪ್ರಾರ್ಥನೆ ನಡೆಸಲಾಯಿತು.

Related posts

ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

Suddi Udaya
error: Content is protected !!