September 6, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

ನೆಲ್ಯಾಡಿ: ಪೆರಿಯಶಾಂತಿ-ಕುದ್ರಾಯವರೆಗಿನ ಮೀಸಲು ಅರಣ್ಯದ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಇರುವ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಉಪ್ಪಿನಂಗಡಿ ವಲಯ ಪ್ರೊಫೆಷನಲ್ ಅರಣ್ಯಾಧಿಕಾರಿ ಹಸ್ತ ಶೆಟ್ಟಿ ಮತ್ತು ವಲಯ ಅರಣ್ಯಾಧಿಕಾರಿ ರಾಘವೇಂದ್ರ ಖಡಕ್ ಸೂಚನೆ ನೀಡಿದ್ದಾರೆ.

ಪ್ರಜಾಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ದಾಖಲಾಗಿರುವ ದೂರುಗಳ ಹಿನ್ನೆಲೆ ಮತ್ತು ಪ್ರಧಾನಮಂತ್ರಿ ಕಾರ್ಯಾಲಯದಿಂದ ಬಂದಿರುವ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪೆರಿಯಶಾಂತಿಯಿಂದ ಕುದ್ರಾಯವರೆಗಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವವರಿಗೆ ಮೌಖಿಕ ಆದೇಶ ನೀಡಲಾಗಿತ್ತು. ಈ ವ್ಯಾಪಾರಸ್ಥರು ಜುಲೈ 15ರೊಳಗೆ ಗೂಡಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸುವ ಭರವಸೆ ನೀಡಿದ್ದರೂ ಈಗಾಗಲೇ ನಿಗದಿತ ಅವಧಿ ಕಳೆದರೂ ಇವುಗಳಲ್ಲಿ ಬಹುಪಾಲು ಇನ್ನೂ ತೆರವುಗೊಳ್ಳಿಲ್ಲ ಎಂದು ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದಾಗಿ ಅರಣ್ಯ ಪ್ರದೇಶದ ಶಾಂತತೆಯನ್ನು ಹದಗೆಡಿಸುವ ಸಂದರ್ಭ ಉಂಟಾಗಿದ್ದು, ಇದರ ಬೆನ್ನಲ್ಲೇ ವ್ಯಾಪಾರಿಗಳು ರಸ್ತೆ ಬದಿ ಇಡುತ್ತಿರುವ ಹಲಸಿನ ಹಣ್ಣು, ಅನನಾಸು ಮುಂತಾದ ಹಣ್ಣುಗಳ ವಾಸನೆಗೆ ಆಕರ್ಷಿತರಾಗಿ ಆನೆಗಳು ಗೂಡಂಗಡಿ ಕಡೆಗೆ ಬರಲಾರಂಭಿಸಿದೆ. ಪರಿಣಾಮವಾಗಿ ಆನೆಗಳ ಚಲನವಲನಕ್ಕೆ ತೊಂದರೆ ಉಂಟಾಗುತ್ತಿದೆ. ಈಗಾಗಲೇ ಈ ಭಾಗದಲ್ಲಿ ಆನೆ ದಾಳಿ ವರದಿಯಾಗಿರುವ ಹಿನ್ನೆಲೆ, ಜೈವಿಕ ಜೀವವೈವಿಧ್ಯ ಹಾಗೂ ಸಾರ್ವಜನಿಕರ ರಕ್ಷಣೆಯ ದೃಷ್ಟಿಯಿಂದ ಅನಧಿಕೃತ ವ್ಯಾಪಾರ ತಕ್ಷಣವೇ ನಿಲ್ಲಿಸಬೇಕಾಗಿದೆ ಎಂದು ಅರಣ್ಯಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

“ಅನಧಿಕೃತವಾಗಿ ಗೂಡಂಗಡಿ ನಡೆಸಿ ಆನೆ ಅಥವಾ ಇತರ ಕಾಡುಪ್ರಾಣಿಗಳಿಂದ ಸಾರ್ವಜನಿಕರಿಗೆ ಏನೇನಾದರೂ ಅನಾಹುತ ಸಂಭವಿಸಿದರೆ, ಅದರ ಹೊಣೆಗಾರರು ನಾವಲ್ಲ. ಕಾನೂನು ಕ್ರಮ ತಪ್ಪದೇ ಜರುಗಲಿದೆ,” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ವ್ಯಾಪಾರಸ್ಥರು ತಮ್ಮ ಗೂಡಂಗಡಿಗಳನ್ನು ತೆರವುಗೊಳಿಸದಿದ್ದರೆ, ಪೊಲೀಸ್ ಭದ್ರತೆ ಜೊತೆಗಿಸಿಕೊಂಡು ಅರಣ್ಯ ಇಲಾಖೆ ನೇರವಾಗಿ ಕಾರ್ಯಾಚರಣೆಗೆ ಇಳಿಯುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಲಾಗಿದೆ.

Related posts

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

Suddi Udaya
error: Content is protected !!