September 6, 2026
ಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭ ಕಲಿತ ವಿದ್ಯಾಸಂಸ್ಥೆ ಹಾಗೂ ಗುರುಗಳನ್ನು ಮರೆಯಬಾರದು: ರಾಜೇಶ್ ಪೂಜಾರಿ

ವೇಣೂರು: ಸರಕಾರಿ ಪ್ರೌಢ ಶಾಲೆಯ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭವು ಜು.19ರಂದು ನಡೆಯಿತು.

ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಕ್ರಮ ಉದ್ಘಾಟಿಸಿ ಗ್ರಾಮೀಣ ಪ್ರದೇಶದ ವೇಣೂರು ಪ್ರೌಢ ಶಾಲೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ತಾನು ಕಲಿತ ಶಾಲೆ ಮತ್ತು ಗುರುಗಳನ್ನು ವಿದ್ಯಾರ್ಥಿಗಳು ಮರೆಯದೆ ಒಳ್ಳೆಯ ಉದ್ಯೋಗ ಪಡೆದು ಸಮಾಜಕ್ಕೆ ಶಕ್ತಿಯಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ವೆಂಕಟೇಶ್ ತುಳುಪುಳೆ ಅವರು ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆಯ ಅಧ್ಯಕ್ಷ ರೊ. ದುರ್ಗಾದಾಸ್ ಶೆಟ್ಟಿ, ಕಾರ್ಯದರ್ಶಿ ರೊ. ಟೀನಾ ಡಿಕೋಸ್, ಲಯನ್ಸ್‌ ಕ್ಲಬ್ ವೇಣೂರಿನ ಕಾರ್ಯದರ್ಶಿ ಲ. ಜಯರಾಮ ಹೆಗ್ಡೆ,ಹಿರಿಯ ಶಿಕ್ಷಕಿ ಸುಕನ್ಯ ಪ್ರಭು, ನೆಲ್ಸನ್ ಹೆರಾಲ್ಡ್ ಕ್ಯಾಸ್ಟಲಿನೊ,ವಿದ್ಯಾರ್ಥಿ ನಾಯಕಿ ಕುಮಾರಿ ಶಬರಿ, ಉಪನಾಯಕ ನರಸಿಂಹ ಕಾಮತ್,ವಿರೋಧ ಪಕ್ಷದ ನಾಯಕಿ ಧೃತಿ ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಸಿದ್ದ ಕಟ್ಟೆ, ಲಯನ್ಸ್ ಕ್ಲಬ್ ವೇಣೂರು, ಎನ್.ಎಸ್.ಎಸ್ ಘಟಕ ಮತ್ತು ಮತದಾನ ಸಾಕ್ಷರತಾ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನೆರವೇರಿತು. ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ರವೀಂದ್ರ ಕೆ. ಸ್ವಾಗತಿಸಿದರು.ಶಿಕ್ಷಕಿ ಸುಶೀಲಾ ಜಿ. ಕಾರ್ಯಕ್ರಮದ ನಿರೂಪಣೆ ಮಾಡಿದರು. ಶಿಕ್ಷಕಿ ಪ್ರೇಮ ಕೆ. ಧನ್ಯವಾದವಿತ್ತರು.

Related posts

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸವಣಾಲು: ಗುತ್ತಿನಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!