25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಸುಬ್ರಹ್ಮಣ್ಯ ರೋಟರಿ ಹಾಗೂ ಸೀನಿಯರ್ ಚೇಂಬರ್ ವತಿಯಿಂದ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲಿಜನ್ ಹಾಗೂ ಡಾ. ರವಿ ಸಮಾಜ ಸೇವಾ ಟ್ರಸ್ಟ್ ಇವರ ಜಂಟಿ ಆಶಯದಲ್ಲಿ ಇಂದು ಕುಮಾರಧಾರ ಕುಲುಕುಂದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಜು.20ರಂದು ಕೈಗೊಳ್ಳಲಾಯಿತು.

ಕುಮಾರಧಾರ ಸೇತುವೆ ಬದಿಯಿಂದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಮೂಲಕವಾಗಿ ಕುಲುಕುಂದ ಮುಖ್ಯ ರಸ್ತೆಯ ಇಕ್ಕಲೆಗಳಲ್ಲಿ ಹಾಗೂ ಕಾಲೋನಿ ರಸ್ತೆಯ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು,ಪ್ಲಾಸ್ಟಿಕ್ ಬಾಟ್ಲುಗಳು ಪ್ಲಾಸ್ಟಿಕ್ ಚೀಲಗಳು ಹಾಗೂ ಇನ್ನಿತರ ಕೊಚ್ಚೆ ವಸ್ತುಗಳನ್ನ ಹಿಕ್ಕಿ, ಶೇಖರಿಸಿ ಇಡೀ ಪರಿಸರವನ್ನು ಸ್ವಚ್ಛಗೊಳಿಸುವ ಕೆಲಸವನ್ನು ಕೈಗೊಳ್ಳಲಾಯಿತು.

ಸೇವಾ ಕಾರ್ಯದಲ್ಲಿ ಡಾlರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ನಾಯಕರು ಹಾಗೂ ಸ್ವಯಂಸೇವಕರುಗಳು ಸಂಘ ಸಂಸ್ಥೆಯ ಸ್ವಯಂಸೇವಕರು ಭಾಗವಹಿಸಿದ್ದರು.

ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಆರ್ ಅವರು ಮಾತನಾಡುತ್ತಾ ” ಸ್ವಚ್ಛ ಪರಿಸರದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಲೇಬೇಕು, ಕುಕ್ಕೆ ಕ್ಷೇತ್ರದಂತಹ ಪವಿತ್ರ ಕ್ಷೇತ್ರವನ್ನು ನಾವು ಸ್ವಚ್ಛತೆಯಿಂದ ಇಟ್ಟುಕೊಳ್ಳಲು ಶ್ರಮಿಸೋಣ. ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯಇದೆ. ಆ ರೀತಿಯಾಗಿ ನಾವೆಲ್ಲರೂ ದೇವರ ಸೇವೆಯನ್ನು ನಿರಂತರವಾಗಿ ಮಾಡೋಣ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಮಾಜ ಸೇವ ಟ್ರಸ್ಟ್ ನ ಮುಖ್ಯಸ್ಥರಾದ ಡಾl ರವಿ ಕಕ್ಕೆಪಧವು, ಸೀನಿಯರ್ ಚೇಂಬರ್ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್, ಸೀನರ್ ಚೇಂಬರ್ ಕಾರ್ಯದರ್ಶಿ ಹಾಗೂ ರೋಟರಿ ಪೂರ್ವ ಅಧ್ಯಕ್ಷ ಗೋಪಾಲ ಎಣ್ಣೆಮಜಲ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

Suddi Udaya
error: Content is protected !!