September 6, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

ನೆಲ್ಯಾಡಿ: ಪೆರಿಯಶಾಂತಿ-ಕುದ್ರಾಯವರೆಗಿನ ಮೀಸಲು ಅರಣ್ಯದ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಇರುವ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಉಪ್ಪಿನಂಗಡಿ ವಲಯ ಪ್ರೊಫೆಷನಲ್ ಅರಣ್ಯಾಧಿಕಾರಿ ಹಸ್ತ ಶೆಟ್ಟಿ ಮತ್ತು ವಲಯ ಅರಣ್ಯಾಧಿಕಾರಿ ರಾಘವೇಂದ್ರ ಖಡಕ್ ಸೂಚನೆ ನೀಡಿದ್ದಾರೆ.

ಪ್ರಜಾಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ದಾಖಲಾಗಿರುವ ದೂರುಗಳ ಹಿನ್ನೆಲೆ ಮತ್ತು ಪ್ರಧಾನಮಂತ್ರಿ ಕಾರ್ಯಾಲಯದಿಂದ ಬಂದಿರುವ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪೆರಿಯಶಾಂತಿಯಿಂದ ಕುದ್ರಾಯವರೆಗಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವವರಿಗೆ ಮೌಖಿಕ ಆದೇಶ ನೀಡಲಾಗಿತ್ತು. ಈ ವ್ಯಾಪಾರಸ್ಥರು ಜುಲೈ 15ರೊಳಗೆ ಗೂಡಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸುವ ಭರವಸೆ ನೀಡಿದ್ದರೂ ಈಗಾಗಲೇ ನಿಗದಿತ ಅವಧಿ ಕಳೆದರೂ ಇವುಗಳಲ್ಲಿ ಬಹುಪಾಲು ಇನ್ನೂ ತೆರವುಗೊಳ್ಳಿಲ್ಲ ಎಂದು ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದಾಗಿ ಅರಣ್ಯ ಪ್ರದೇಶದ ಶಾಂತತೆಯನ್ನು ಹದಗೆಡಿಸುವ ಸಂದರ್ಭ ಉಂಟಾಗಿದ್ದು, ಇದರ ಬೆನ್ನಲ್ಲೇ ವ್ಯಾಪಾರಿಗಳು ರಸ್ತೆ ಬದಿ ಇಡುತ್ತಿರುವ ಹಲಸಿನ ಹಣ್ಣು, ಅನನಾಸು ಮುಂತಾದ ಹಣ್ಣುಗಳ ವಾಸನೆಗೆ ಆಕರ್ಷಿತರಾಗಿ ಆನೆಗಳು ಗೂಡಂಗಡಿ ಕಡೆಗೆ ಬರಲಾರಂಭಿಸಿದೆ. ಪರಿಣಾಮವಾಗಿ ಆನೆಗಳ ಚಲನವಲನಕ್ಕೆ ತೊಂದರೆ ಉಂಟಾಗುತ್ತಿದೆ. ಈಗಾಗಲೇ ಈ ಭಾಗದಲ್ಲಿ ಆನೆ ದಾಳಿ ವರದಿಯಾಗಿರುವ ಹಿನ್ನೆಲೆ, ಜೈವಿಕ ಜೀವವೈವಿಧ್ಯ ಹಾಗೂ ಸಾರ್ವಜನಿಕರ ರಕ್ಷಣೆಯ ದೃಷ್ಟಿಯಿಂದ ಅನಧಿಕೃತ ವ್ಯಾಪಾರ ತಕ್ಷಣವೇ ನಿಲ್ಲಿಸಬೇಕಾಗಿದೆ ಎಂದು ಅರಣ್ಯಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

“ಅನಧಿಕೃತವಾಗಿ ಗೂಡಂಗಡಿ ನಡೆಸಿ ಆನೆ ಅಥವಾ ಇತರ ಕಾಡುಪ್ರಾಣಿಗಳಿಂದ ಸಾರ್ವಜನಿಕರಿಗೆ ಏನೇನಾದರೂ ಅನಾಹುತ ಸಂಭವಿಸಿದರೆ, ಅದರ ಹೊಣೆಗಾರರು ನಾವಲ್ಲ. ಕಾನೂನು ಕ್ರಮ ತಪ್ಪದೇ ಜರುಗಲಿದೆ,” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ವ್ಯಾಪಾರಸ್ಥರು ತಮ್ಮ ಗೂಡಂಗಡಿಗಳನ್ನು ತೆರವುಗೊಳಿಸದಿದ್ದರೆ, ಪೊಲೀಸ್ ಭದ್ರತೆ ಜೊತೆಗಿಸಿಕೊಂಡು ಅರಣ್ಯ ಇಲಾಖೆ ನೇರವಾಗಿ ಕಾರ್ಯಾಚರಣೆಗೆ ಇಳಿಯುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಲಾಗಿದೆ.

Related posts

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya
error: Content is protected !!