24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

ನೆಲ್ಯಾಡಿ: ಪೆರಿಯಶಾಂತಿ-ಕುದ್ರಾಯವರೆಗಿನ ಮೀಸಲು ಅರಣ್ಯದ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಇರುವ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಉಪ್ಪಿನಂಗಡಿ ವಲಯ ಪ್ರೊಫೆಷನಲ್ ಅರಣ್ಯಾಧಿಕಾರಿ ಹಸ್ತ ಶೆಟ್ಟಿ ಮತ್ತು ವಲಯ ಅರಣ್ಯಾಧಿಕಾರಿ ರಾಘವೇಂದ್ರ ಖಡಕ್ ಸೂಚನೆ ನೀಡಿದ್ದಾರೆ.

ಪ್ರಜಾಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ದಾಖಲಾಗಿರುವ ದೂರುಗಳ ಹಿನ್ನೆಲೆ ಮತ್ತು ಪ್ರಧಾನಮಂತ್ರಿ ಕಾರ್ಯಾಲಯದಿಂದ ಬಂದಿರುವ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪೆರಿಯಶಾಂತಿಯಿಂದ ಕುದ್ರಾಯವರೆಗಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವವರಿಗೆ ಮೌಖಿಕ ಆದೇಶ ನೀಡಲಾಗಿತ್ತು. ಈ ವ್ಯಾಪಾರಸ್ಥರು ಜುಲೈ 15ರೊಳಗೆ ಗೂಡಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸುವ ಭರವಸೆ ನೀಡಿದ್ದರೂ ಈಗಾಗಲೇ ನಿಗದಿತ ಅವಧಿ ಕಳೆದರೂ ಇವುಗಳಲ್ಲಿ ಬಹುಪಾಲು ಇನ್ನೂ ತೆರವುಗೊಳ್ಳಿಲ್ಲ ಎಂದು ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದಾಗಿ ಅರಣ್ಯ ಪ್ರದೇಶದ ಶಾಂತತೆಯನ್ನು ಹದಗೆಡಿಸುವ ಸಂದರ್ಭ ಉಂಟಾಗಿದ್ದು, ಇದರ ಬೆನ್ನಲ್ಲೇ ವ್ಯಾಪಾರಿಗಳು ರಸ್ತೆ ಬದಿ ಇಡುತ್ತಿರುವ ಹಲಸಿನ ಹಣ್ಣು, ಅನನಾಸು ಮುಂತಾದ ಹಣ್ಣುಗಳ ವಾಸನೆಗೆ ಆಕರ್ಷಿತರಾಗಿ ಆನೆಗಳು ಗೂಡಂಗಡಿ ಕಡೆಗೆ ಬರಲಾರಂಭಿಸಿದೆ. ಪರಿಣಾಮವಾಗಿ ಆನೆಗಳ ಚಲನವಲನಕ್ಕೆ ತೊಂದರೆ ಉಂಟಾಗುತ್ತಿದೆ. ಈಗಾಗಲೇ ಈ ಭಾಗದಲ್ಲಿ ಆನೆ ದಾಳಿ ವರದಿಯಾಗಿರುವ ಹಿನ್ನೆಲೆ, ಜೈವಿಕ ಜೀವವೈವಿಧ್ಯ ಹಾಗೂ ಸಾರ್ವಜನಿಕರ ರಕ್ಷಣೆಯ ದೃಷ್ಟಿಯಿಂದ ಅನಧಿಕೃತ ವ್ಯಾಪಾರ ತಕ್ಷಣವೇ ನಿಲ್ಲಿಸಬೇಕಾಗಿದೆ ಎಂದು ಅರಣ್ಯಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

“ಅನಧಿಕೃತವಾಗಿ ಗೂಡಂಗಡಿ ನಡೆಸಿ ಆನೆ ಅಥವಾ ಇತರ ಕಾಡುಪ್ರಾಣಿಗಳಿಂದ ಸಾರ್ವಜನಿಕರಿಗೆ ಏನೇನಾದರೂ ಅನಾಹುತ ಸಂಭವಿಸಿದರೆ, ಅದರ ಹೊಣೆಗಾರರು ನಾವಲ್ಲ. ಕಾನೂನು ಕ್ರಮ ತಪ್ಪದೇ ಜರುಗಲಿದೆ,” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ವ್ಯಾಪಾರಸ್ಥರು ತಮ್ಮ ಗೂಡಂಗಡಿಗಳನ್ನು ತೆರವುಗೊಳಿಸದಿದ್ದರೆ, ಪೊಲೀಸ್ ಭದ್ರತೆ ಜೊತೆಗಿಸಿಕೊಂಡು ಅರಣ್ಯ ಇಲಾಖೆ ನೇರವಾಗಿ ಕಾರ್ಯಾಚರಣೆಗೆ ಇಳಿಯುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಲಾಗಿದೆ.

Related posts

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya
error: Content is protected !!