23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭ

ವೇಣೂರು: ಸರಕಾರಿ ಪ್ರೌಢ ಶಾಲೆಯ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭವು ಜು.19ರಂದು ನಡೆಯಿತು.

ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಕ್ರಮ ಉದ್ಘಾಟಿಸಿ ಗ್ರಾಮೀಣ ಪ್ರದೇಶದ ವೇಣೂರು ಪ್ರೌಢ ಶಾಲೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ.ತಾನು ಕಲಿತ ಶಾಲೆ ಮತ್ತು ಗುರುಗಳನ್ನು ವಿದ್ಯಾರ್ಥಿಗಳು ಮರೆಯದೆ ಒಳ್ಳೆಯ ಉದ್ಯೋಗ ಪಡೆದು ಸಮಾಜಕ್ಕೆ ಶಕ್ತಿಯಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ವೆಂಕಟೇಶ್ ತುಳುಪುಳೆ ಅವರು ವಹಿಸಿದ್ದರು.

ವೇದಿಕೆಯಲ್ಲಿ ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆಯ ಅಧ್ಯಕ್ಷ ರೊ. ದುರ್ಗಾದಾಸ್ ಶೆಟ್ಟಿ, ಕಾರ್ಯದರ್ಶಿ ರೊ. ಟೀನಾ ಡಿಕೋಸ್, ಲಯನ್ಸ್‌ ಕ್ಲಬ್ ವೇಣೂರಿನ ಕಾರ್ಯದರ್ಶಿ ಲ. ಜಯರಾಮ ಹೆಗ್ಡೆ,ಹಿರಿಯ ಶಿಕ್ಷಕಿ ಸುಕನ್ಯ ಪ್ರಭು, ನೆಲ್ಸನ್ ಹೆರಾಲ್ಡ್ ಕ್ಯಾಸ್ಟಲಿನೊ,ವಿದ್ಯಾರ್ಥಿ ನಾಯಕಿ ಕುಮಾರಿ ಶಬರಿ, ಉಪನಾಯಕ ನರಸಿಂಹ ಕಾಮತ್,ವಿರೋಧ ಪಕ್ಷದ ನಾಯಕಿ ಧೃತಿ ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಸಿದ್ದ ಕಟ್ಟೆ, ಲಯನ್ಸ್ ಕ್ಲಬ್ ವೇಣೂರು, ಎನ್.ಎಸ್.ಎಸ್ ಘಟಕ ಮತ್ತು ಮತದಾನ ಸಾಕ್ಷರತಾ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನೆರವೇರಿತು.

ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ರವೀಂದ್ರ ಕೆ. ಸ್ವಾಗತಿಸಿದರು.ಶಿಕ್ಷಕಿ ಸುಶೀಲಾ ಜಿ. ಕಾರ್ಯಕ್ರಮದ ನಿರೂಪಣೆ ಮಾಡಿದರು. ಶಿಕ್ಷಕಿ ಪ್ರೇಮ ಕೆ. ಧನ್ಯವಾದವಿತ್ತರು.

Related posts

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya
error: Content is protected !!